ಚಿರತೆ ಸಾಯಿಸಲು ಅಮಾನವೀಯ ದಾರಿ ಹಿಡಿದ ಜನ. ಸುದ್ದಿ ಓದಿ.

Date:

ಚಿರತೆ ಹಾವಳಿಯಿಂದ ತಪ್ಪಿಸಿಕೊಳ್ಳಲು ಅರಣ್ಯ ಪ್ರದೇಶದ ಸಮೀಪ ಇರುವ ಗ್ರಾಮದ ಕೆಲ ಜನ ಚಿರತೆಯನ್ನು ಕೊಂದಿದ್ದಾರೆ. ಹೌದು ಚಿರತೆಗಳನ್ನು ಕೊಲ್ಲಲು ಇವರು ಉಪಯೋಗಿಸಿರುವ ಮಾರ್ಗ ಅತ್ಯಂತ ಅಮಾನವೀಯ ಮತ್ತು ಕಾನೂನು ಬಾಹಿರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಇಬ್ಬರು ಈ ಕೆಲಸವನ್ನು ಮಾಡಿದ್ದು ಚಿರತೆಗಳನ್ನು ಕೊಲ್ಲಲು ವಿಷ ಹಾಕಿದ್ದಾರೆ.

ಹೌದು ನಿರಂತರ ಚಿರತೆ ಹಾವಳಿಯಿಂದ ಬೇಸತ್ತಿದ್ದ ಇವರು ಸತ್ತು ಬಿದ್ದಿದ್ದ ನಾಯಿಯ ಮಾಂಸಕ್ಕೆ ವಿಷವನ್ನು ಹಾಕಿ ಇಟ್ಟಿದ್ದಾರೆ. ಇದನ್ನು ಸೇವಿಸಿದ 10 ವರ್ಷದ ಹೆಣ್ಣು ಚಿರತೆ ಮತ್ತು 8 ತಿಂಗಳ ಎರಡು ಚಿರತೆಗಳು ಸಾವನ್ನಪ್ಪಿವೆ. ಇನ್ನು ಚಿರತೆಗಳಿಗೆ ವಿಷ ಹಾಕಿದ ಇಬ್ಬರ ಮೇಲೆ ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಅವರಿಬ್ಬರೂ ಗ್ರಾಮದಿಂದ ಕಣ್ಮರೆ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...