ಚೀನಾ ವಿರುದ್ಧ ಸೆಣಸಾಡುವ ಕನ್ನಡಿಗನಿಗೆ ಕಿಚ್ಚನ ವಿಶ್

Date:

ಬೆಂಗಳೂರು ಮೂಲದ ಕಾಂತರಾಜ್ ಅಗಸ ಎಂಬ ಪ್ರತಿಭೆ ಸಿಂಗಾಪುರದ ಎಂಎಂಎ ಚಾಂಪಿಯನ್‍ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಮೇ 28ರಂದು ಚೀನಾದ ಕ್ಸಿ-ವೈ ವಿರುದ್ಧ ಕಾಂತರಾಜ್ ಅಗಸ ಸೆಣಸಾಡಲಿದ್ದಾರೆ.

ಹೀಗೆ ಬಹು ನಿರೀಕ್ಷಿತ ಒನ್ ಚಾಂಪಿಯನ್‍ಶಿಪ್‌ನಲ್ಲಿ ಭಾರತದ ಪರ ಕನ್ನಡಿಗ ಕಾಂತರಾಜ್ ಅಗಸ ಭಾಗವಹಿಸುತ್ತಿರುವುದಕ್ಕೆ ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸಂತಸ ವ್ಯಕ್ತಪಡಿಸಿದ್ದಾರೆ. ಕಾಂತರಾಜ್ ಅಗಸಗೆ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿರುವ ಕಿಚ್ಚ ಸುದೀಪ್ ‘ಸ್ಥಳೀಯ ಪ್ರತಿಭೆ ಕಾಂತರಾಜ್ ಅಗಸ ಸಿಂಗಾಪುರದ ಎಂಎಂಎ ಚಾಂಪಿಯನ್‍ಶಿಪ್‌ನಲ್ಲಿ ಚೀನಾದ ಕ್ಸಿ-ವೈ ವಿರುದ್ಧ ಸೆಣಸಾಡಲಿದ್ದು, ಅವರಿಗೆ ಯಶಸ್ಸು ಸಿಗಲೆಂದು ಹಾರೈಸುತ್ತೇನೆ. ಮೇ 28ಕ್ಕೆ ನಾನು ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಟ್ವಿಟ್ಟರ್‌ನಲ್ಲಿ ಸುದೀಪ್ ಬರೆದುಕೊಂಡಿದ್ದಾರೆ.


ಸುದೀಪ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕಾಂತರಾಜ್ ‘ತುಂಬಾ ಧನ್ಯವಾದಗಳು ಸರ್, ನಿಮ್ಮ ಪ್ರೋತ್ಸಾಹ ಮತ್ತು ಪ್ರೀತಿ ಸದಾ ಹೀಗೆ ಇರಲಿ ಎಂದು ಆಶಿಸುತ್ತೇನೆ’ ಎಂದು ಸಂತಸ ವ್ಯಕ್ತಪಡಿಸಿದರು.

 

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...