ಚೊಚ್ಚಲ ಶತಕ ಬಾರಿಸಿದ ಶ್ರೇಯಸ್​ ; 5 ಕ್ರಮಾಂಕದಲ್ಲೂ ರಾಹುಲ್ ಅಬ್ಬರ..!

Date:

ಟೀಮ್ ಇಂಡಿಯಾದ ಯುವ ಬ್ಯಾಟ್ಸ್​ಮನ್ ಶ್ರೇಯಸ್ ಅಯ್ಯರ್ ಚೊಚ್ಚಲ ಏಕದಿನ ಶತಕ ಬಾರಿಸಿ ಮಿಂಚಿದ್ದಾರೆ. ಕನ್ನಡಿಗ ರಾಹುಲ್ ಮತ್ತೆ ಓಪನಿಂಗ್ನಿಂದ ಮಧ್ಯಮ ಕ್ರಮಾಂಕಕ್ಕೆ ಬಂದಿದ್ದು, 5ನೇ ಕ್ರಮಾಂಕದಲ್ಲಿಯೂ ಬ್ಯಾಟ್​ ಬೀಸಿ ಮಿಂಚಿದ್ದಾರೆ.
ಹ್ಯಾಮಿಲ್ಟನ್​ನಲ್ಲಿ ನಡೆಯುತ್ತಿರೋ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್​ಗಳ ಬೆವರಿಳಿಸಿದ ಶ್ರೇಯಸ್ ಅಯ್ಯರ್ 107 ಬಾಲ್​​ಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 103ರನ್​ ಬಾರಿಸಿದರು. ಬಳಿಕಸ ಟೀಮ್ ಸೌಥಿಗೆ ವಿಕೆಟ್ ಒಪ್ಪಿಸಿದ್ರು.
ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಈ ಪಂದ್ಯದ ಮೂಲಕ ಪದಾರ್ಪಣೆ ಮಾಡಿದ ಪೃಥ್ವಿ ಶಾ ಕನ್ನಡಿಗ ಮಯಾಂಕ್ ಅಗರ್​ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಈ ಹೊಸ ಆರಂಭಿಕ ಜೋಡಿ 50ರನ್ ಜೊತೆಯಾಟವಾಡಿತು. ಪೃಥ್ವಿ ಶಾ 20 ರನ್ ಬಾರಿಸಿ ಔಟಾದರು. ಮತ್ತೆ ತಂಡಕ್ಕೆ ನಾಲ್ಕು ರನ್ ಸೇರುವಷ್ಟರಲ್ಲಿ ಮಯಾಂಕ್ ಪೆವಿಲಿಯನ್ ಸೇರಿದ್ರು. ನಂತರ ಜೊತೆಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ 104ರನ್ ಜೊತೆಯಾಟವಾಡಿದ್ರು. ಕೊಹ್ಲಿ 51ರನ್ ಬಾರಿಸಿ ಪೆವಿಲಿಯನ್ ಸೇರಿದ್ರೆ, ಅಯ್ಯರ್ 103 ರನ್ ಬಾರಿಸಿದ್ರು. 5ನೇ ಕ್ರಮಾಂಕದಲ್ಲಿ ಬಂದ ಕನ್ನಡಿಗ ಕೆ.ಎಲ್ ರಾಹುಲ್ ಅಜೇಯ 88 ರನ್ ಬಾರಿಸಿ ಅದ್ಭುತ ಪ್ರದರ್ಶನ ಮುಂದುವರೆಸಿದ್ರು. ಕೇದಾರ್ ಜಾದವ್ ಅಜೇಯ 26ರನ್ ಕೊಡುಗೆ ನೀಡಿದರು. ಭಾರತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 347 ರನ್ ಮಾಡಿತು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...