ಚೊಚ್ಚಲ ಶತಕ ಬಾರಿಸಿದ ಶ್ರೇಯಸ್​ ; 5 ಕ್ರಮಾಂಕದಲ್ಲೂ ರಾಹುಲ್ ಅಬ್ಬರ..!

Date:

ಟೀಮ್ ಇಂಡಿಯಾದ ಯುವ ಬ್ಯಾಟ್ಸ್​ಮನ್ ಶ್ರೇಯಸ್ ಅಯ್ಯರ್ ಚೊಚ್ಚಲ ಏಕದಿನ ಶತಕ ಬಾರಿಸಿ ಮಿಂಚಿದ್ದಾರೆ. ಕನ್ನಡಿಗ ರಾಹುಲ್ ಮತ್ತೆ ಓಪನಿಂಗ್ನಿಂದ ಮಧ್ಯಮ ಕ್ರಮಾಂಕಕ್ಕೆ ಬಂದಿದ್ದು, 5ನೇ ಕ್ರಮಾಂಕದಲ್ಲಿಯೂ ಬ್ಯಾಟ್​ ಬೀಸಿ ಮಿಂಚಿದ್ದಾರೆ.
ಹ್ಯಾಮಿಲ್ಟನ್​ನಲ್ಲಿ ನಡೆಯುತ್ತಿರೋ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್​ಗಳ ಬೆವರಿಳಿಸಿದ ಶ್ರೇಯಸ್ ಅಯ್ಯರ್ 107 ಬಾಲ್​​ಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 103ರನ್​ ಬಾರಿಸಿದರು. ಬಳಿಕಸ ಟೀಮ್ ಸೌಥಿಗೆ ವಿಕೆಟ್ ಒಪ್ಪಿಸಿದ್ರು.
ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಈ ಪಂದ್ಯದ ಮೂಲಕ ಪದಾರ್ಪಣೆ ಮಾಡಿದ ಪೃಥ್ವಿ ಶಾ ಕನ್ನಡಿಗ ಮಯಾಂಕ್ ಅಗರ್​ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಈ ಹೊಸ ಆರಂಭಿಕ ಜೋಡಿ 50ರನ್ ಜೊತೆಯಾಟವಾಡಿತು. ಪೃಥ್ವಿ ಶಾ 20 ರನ್ ಬಾರಿಸಿ ಔಟಾದರು. ಮತ್ತೆ ತಂಡಕ್ಕೆ ನಾಲ್ಕು ರನ್ ಸೇರುವಷ್ಟರಲ್ಲಿ ಮಯಾಂಕ್ ಪೆವಿಲಿಯನ್ ಸೇರಿದ್ರು. ನಂತರ ಜೊತೆಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ 104ರನ್ ಜೊತೆಯಾಟವಾಡಿದ್ರು. ಕೊಹ್ಲಿ 51ರನ್ ಬಾರಿಸಿ ಪೆವಿಲಿಯನ್ ಸೇರಿದ್ರೆ, ಅಯ್ಯರ್ 103 ರನ್ ಬಾರಿಸಿದ್ರು. 5ನೇ ಕ್ರಮಾಂಕದಲ್ಲಿ ಬಂದ ಕನ್ನಡಿಗ ಕೆ.ಎಲ್ ರಾಹುಲ್ ಅಜೇಯ 88 ರನ್ ಬಾರಿಸಿ ಅದ್ಭುತ ಪ್ರದರ್ಶನ ಮುಂದುವರೆಸಿದ್ರು. ಕೇದಾರ್ ಜಾದವ್ ಅಜೇಯ 26ರನ್ ಕೊಡುಗೆ ನೀಡಿದರು. ಭಾರತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 347 ರನ್ ಮಾಡಿತು.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...