ಛೇ.. ಎಂಥಾ ಸುದ್ದಿ..? ಮಾಜಿ ಪ್ರಧಾನಿ ದೇವೇಗೌಡ್ರ ತವರಲ್ಲೇ ಜೀತಪದ್ಧತಿ ಜೀವಂತ!

Date:

ದೇಶ ಆಧುನಿಕತೆಯತ್ತ ಸಾಗುತ್ತಿದೆ. ಮಡಿವಂತಿಕೆ ಸಮಾಜದಿಂದ ನಾವೆಲ್ಲಾ ಹೊರಬರುತ್ತಿದ್ದೇವೆ. ಸಮಾನತೆಯ ಮಂತ್ರ ಫಲಿಸಿದೆ ಎಂದು ಭ್ರಮೆಯಲ್ಲಿದ್ದೇವೆ! ಆದರೆ, ಇಂದಿಗೂ ನಮ್ಮಲ್ಲಿನ ಅನಿಷ್ಠ ಪದ್ಧತಿಗಳು ಹಾಗೇ ಇವೆ.
ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನ ಜಿಲ್ಲೆಯಲ್ಲಿ ಜೀತಪದ್ದತಿ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹೋಗಿ ನಾಲ್ವರು ಮಕ್ಕಳು, ನಾಲ್ವರು ಮಹಿಳೆಯರು ಹಾಗೂ 8 ಮಂದಿ ಪುರುಷರನ್ನು ರಕ್ಷಿಸಿದ್ದಾರೆ.


ಹೊಳೆನರಸೀಪುರದಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬಯಲಿಗೆ ಬಂದಿದೆ, ಬಾಲಕಾರ್ಮಿಕರು ಸೇರಿದಂತೆ 16 ಮಂದಿ ಅಮಾಯಕರನ್ನು ರಕ್ಷಿಸಲಾಗಿದೆ. ಮುಂಡನಹಳ್ಳಿಯ ಸೋಮಶೇಖರ್ ಎಂಬುವವರ ಜಮೀನಿನಲ್ಲಿ ಜೀತಪದ್ಧತಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಬ್ಬಿನ ಗದ್ದೆಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದ ಸೋಮಶೇಖರ್ ಅತೀ ಕಡಿಮೆ ಹಣ ನೀಡಿ ದಿನಕ್ಕೆ 15 ಗಂಟೆಗಳ ಕಾಲ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಶೇಖರ್ ಮತ್ತು ಬದ್ಯಾನಾಯಕ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...