ಜಂಬೂ ಸವಾರಿ ವೇಳೆ ಸಿಎಂ ಯಡಿಯೂರಪ್ಪ ನಡೆದುಕೊಂಡ ರೀತಿ ಇದೀಗ ವಿವಾದ ಸೃಷ್ಟಿಸಿದೆ..!

Date:

ನಿನ್ನೆ ಅಂದರೆ ಜಂಬೂ ಸವಾರಿ ನಡೆಯುತ್ತಿದ್ದ ವೇಳೆ ನಂದಿ ಧ್ವಜ ಪೂಜೆ ಮುಗಿದ ನಂತರ ಸಿಎಂ ಯಡಿಯೂರಪ್ಪನವರ ಕಾಲಿಗೆ ಬಿಜೆಪಿ ಮುಖಂಡ ಕಾ.ಪು ಸಿದ್ದಲಿಂಗಸ್ವಾಮಿ ಅವರು ತಮ್ಮ ಕೈಯಾರೆ ಚಪ್ಪಲಿಯನ್ನು ತಂದು ತೊಡಿಸಿದ್ದಾರೆ. ಹೌದು ನಂದಿಧ್ವಜ ಪೂಜೆ ಮುಗಿದ ನಂತರ ಯಡಿಯೂರಪ್ಪನವರು ಬರಿಗಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಕಾ.ಪು ಸಿದ್ದಲಿಂಗ ಸ್ವಾಮಿ ಅವರು ತಮ್ಮ ನಾಯಕನಿಗೆ ಚಪ್ಪಲಿಯನ್ನು ತಂದು ತೊಡಿಸಿದರು.

ಬಿಸಿಲಿನಲ್ಲಿ ನಡೆಯುತ್ತಿದ್ದ ತಮ್ಮ ನಾಯಕನ ಪರಿಸ್ಥಿತಿಯನ್ನು ಕಂಡು ಕಾ.ಪು ಸಿದ್ದಲಿಂಗ ಸ್ವಾಮಿ ಅವರು ಈ ಕೆಲಸವನ್ನೇನೋ ಮಾಡಿದರು ಆದರೆ ಇದೀಗ ಈ ಕಾರ್ಯವೇ ವಿವಾದವನ್ನು ಸೃಷ್ಟಿಸಿದ್ದು , ಮತ್ತೊಬ್ಬರ ಕೈಯಲ್ಲಿ ಚಪ್ಪಲಿ ತೊಡಿಸಿ ಕೊಳ್ಳುವಂತಹ ಬುದ್ಧಿ ಯಡಿಯೂರಪ್ಪನವರಿಗೆ ಯಾಕೆ ಬಂತು ಅವರೆ ಹಾಕಿ ಕೊಳ್ಳಬಹುದಿತ್ತು ಎಂದೆಲ್ಲಾ ಮಾತುಗಳು ಕೇಳಿ ಬರುತ್ತಿವೆ. ಅಷ್ಟು ದೊಡ್ಡ ಮಟ್ಟದ ಕಾರ್ಯಕ್ರಮದಲ್ಲಿ ಈ ರೀತಿಯ ನಡೆಯನ್ನು ಒಬ್ಬ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಮಾಡಿದ್ದು ತಪ್ಪು ಎಂದು ಹಲವಾರು ಮಂದಿ ಹೇಳುತ್ತಿದ್ದಾರೆ. ನಾಯಕರಾಗಿ ಇತರರ ಕೈಯಿಂದ ಚಪ್ಪಲಿ ಹಾಕಿಸಿಕೊಂಡಿದ್ದು ಈ ಹಿಂದೆ ಹಲವಾರು ಮಂದಿ ಮಾಡಿದ ಕೆಲಸವೇ….

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...