ಜಗ್ಗೇಶ್ – ದರ್ಶನ್ ಫ್ಯಾನ್ಸ್ ನಡುವೆ ತಂದಿಟ್ಟು ತಮಾಷೆ ನೋಡಿದವನಾರು?

Date:

ನಟ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ವಿವಾದ ಸುಖಾಂತ್ಯ ಕಂಡಿದೆ. ದರ್ಶನ್ ಅವರೇ ಜಗ್ಗೇಶ್ ಅವರಿಗೆ ಕ್ಷಮೆ ಯಾಚಿಸಿ ವಿವಾದಕ್ಕೆ ತೆರೆ ಎಳೆದಿದ್ದಾರೆ. ಇನ್ನೂ ಇಷ್ಟೆಲ್ಲ ಸಂಭವಿಸಲು ಕಾರಣ ಆ ಒಬ್ಬ ವ್ಯಕ್ತಿ. ಹೌದು ಆ ಒಬ್ಬ ಕಾಣದ ವ್ಯಕ್ತಿ ಇಷ್ಟೆಲ್ಲಾ ಘಟನೆಗಳಿಗೆ ಕಾರಣ.

 

 

ಜಗ್ಗೇಶ್ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಆಡಿಯೋ ಲೀಕ್ ಮಾಡುವ ಮುಖಾಂತರ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಜಗಳ ತಂದಿಟ್ಟು ತಮಾಷೆ ನೋಡುತ್ತಾ ಕುಳಿತಿದ್ದ ಆ ವ್ಯಕ್ತಿ.

 

ಹೌದು ಇತ್ತ ಜಗ್ಗೇಶ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಮಾತಿಗೆ ಮಾತು ನಡೆಯುತ್ತಿದ್ದರೆ ಆ ವ್ಯಕ್ತಿ ಮಾತ್ರ ತಾನು ಅಂದುಕೊಂಡಿದ್ದನ್ನು ಸಾಧಿಸಿ ಖುಷಿಪಡುತ್ತಿದ್ದ. ಹೇಗಾದರೂ ಮಾಡಿ ಜಗ್ಗೇಶ್ ಮತ್ತು ದರ್ಶನ್ ಅವರನ್ನ ಬೇರೆ ಮಾಡಬೇಕು ಎಂದು ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ ಆ ವ್ಯಕ್ತಿಗೆ ಇದೀಗ ನಿರಾಸೆಯಾಗಿದೆ. ಯಾಕೆಂದರೆ ಸ್ವತಃ ದರ್ಶನ್ ಅವರೇ ಜಗ್ಗೇಶ್ ಅವರ ಬಳಿ ಕ್ಷಮೆ ಯಾಚಿಸಿ ಒಂದಾಗಿದ್ದಾರೆ.

 

 

ಇಲ್ಲದ ಆಡಿಯೋವನ್ನು ತಿರುಚಿ ದಂಗೆ ಎಬ್ಬಿಸಿದ ಆ ಕಾಣದ ವ್ಯಕ್ತಿ ಇದೀಗ ಕಂಗಾಲಾಗಿರುವುದಂತೂ ಪಕ್ಕಾ. ಈ ರೀತಿ ಮನೆ ಹಾಳು ಮಾಡುವ ಕೆಲಸವನ್ನು ಆ ವ್ಯಕ್ತಿ ಇಲ್ಲಿಗೆ ನಿಲ್ಲಿಸುತ್ತಾನೋ ಅಥವಾ ಮತ್ತೆ ಮುಂದುವರೆಸುತ್ತಾನಾ ಎಂಬುದು ದೇವರೇ ಬಲ್ಲ..

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...