ಜಾತಿಗಣತಿ ಓದದೆ ಅವೈಜ್ಞಾನಿಕ ಅಂದ್ರೆ ಹೇಗೆ!? ಕಾನೂನು ಸಚಿವರ ಪ್ರಶ್ನೆ!?

Date:

ಜಾತಿಗಣತಿ ಓದದೆ ಅವೈಜ್ಞಾನಿಕ ಅಂದ್ರೆ ಹೇಗೆ!? ಕಾನೂನು ಸಚಿವರ ಪ್ರಶ್ನೆ!?

ಗದಗ:- ಜಾತಿಗಣತಿ ಓದದೆ ಅವೈಜ್ಞಾನಿಕ ಅಂದ್ರೆ ಹೇಗೆ!? ಎಂದು ಕಾನೂನು ಸಚಿವ ಹೆಚ್ ಕೆ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಅವೈಜ್ಞಾನಿಕ ಹೇಗೆ ಆಗುತ್ತದೆ. ಅವೈಜ್ಞಾನಿಕ, ತಪ್ಪು ವರದಿ, ಯಾರೋ ಹೇಳಿ ಬರೆಸಿದ್ದಾರೆ ಎಂಬ ಮಾತುಗಳು ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇವೆಲ್ಲಾ ಸಮಾಜ ದ್ರೋಹಿ ಮಾತುಗಳು ಎಂದರು.

ಜಾತಿಗಣತಿ ವಿವರಗಳು ಬಹುತೇಕ ಬಹಿರಂಗಗೊಂಡಿವೆ. ನಮಗೂ ಅದರ ಪ್ರತಿಗಳು ದೊರೆತಿವೆ. ಏ.17ರಂದು ವಿಶೇಷ ಕ್ಯಾಬಿನೆಟ್ ಸಭೆ ಕರೆಯಲಾಗಿದೆ. ಇದರಲ್ಲಿ ರಾಜಕಾರಣ ಮಾಡಲು ಹೋಗಬಾರದು. ಸಮೀಕ್ಷೆಗಳು ಏನಿವೆ ಎಂಬುದು ಗೊತ್ತಿಲ್ಲದೆ ತಮ್ಮ ಅಭಿಪ್ರಾಯಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸರ್ಕಾರ ಇನ್ನೂ ಏನು ನಿರ್ಣಯ ಮಾಡಿಲ್ಲ. ಏನು ಸಮೀಕ್ಷೆ ಆಗಿದೆ ಅದನ್ನು ನಾವು ಮಂಡನೆ ಮಾಡಿದ್ದೇವೆ. ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಬರೆದಿದ್ದಾರೆ ಎಂದು ಆರ್. ಅಶೋಕ್ ಹೇಳಿದ್ದಾರೆ. ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ. ಅದರಲ್ಲಿ ತಕರಾರು ಇದ್ದರೆ, ಹೀಗೆ ಮಾಡಿಲ್ಲ. ಹೀಗೆ ಮಾಡಿ ಎಂಬ ಅಭಿಪ್ರಾಯ ಸೂಚಿಸಿರಿ. ಅದನ್ನು ಸರಿಪಡಿಸುವುದು ಇದ್ದರೆ ಮಾಡುತ್ತೇವೆ ಎಂದರು

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...