ಜಾತಿ ನಿಂದನೆ ಪ್ರಕರಣ: ಆಡಿಯೋ ಶಾಸಕ ಮುನಿರತ್ನದ್ದೇ ಎಂದು ದೃಢ

Date:

ಜಾತಿ ನಿಂದನೆ ಪ್ರಕರಣ: ಆಡಿಯೋ ಶಾಸಕ ಮುನಿರತ್ನದ್ದೇ ಎಂದು ದೃಢ

 

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಲಂಚ ಕೇಳಿದ್ದಲ್ಲದೇ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದಕ್ಕೆ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೆ ಇದೀಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾತಿ ನಿಂದನೆ ಮಾಡಿದ ಆರೋಪದಡಿ FSL ವರದಿಯಲ್ಲಿ BJP ಶಾಸಕನ ಧ್ವನಿ ಧೃಡವಾಗಿದೆ.
ಫೋನ್ ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್ಅನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ.
ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್ಐಆರ್ ದಾಖಲಾಗಿತ್ತು.
ಬಳಿಕ ಸೆ.14ರಂದು ಎಸ್ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ಗೆ ಕಳುಹಿಸಿದರು. ಈಗ ಎಫ್ಎಸ್ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ ಕೈಸೇರಿದ್ದು, ಮುನಿರತ್ನ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಆಡಿಯೋ ಧ್ವನಿ ಧೃಡವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...