ಜಾಧವ್ ಗೆ ‘ಲೋಕ’ ಟಿಕೆಟ್ ಫಿಕ್ಸ್.! ಪ್ರತಿಸ್ಪರ್ಧಿ ಯಾರು ಗೊತ್ತಾ?

Date:

ಕಲಬುರಗಿ : ಮೈತ್ರಿಯ ಮೊದಲ ವಿಕಟ್ ಪತವಾಗಿದೆ. ಚಿಂಚೊಳ್ಳಿ ಶಾಸಕ ಉಮೇಶ್ ಜಾಧವ್ ಅವರ ರಾಜಕೀಯ ನಡೆಯ ಬಗೆಗಿನ ಪ್ರಹಸನ ಒಂದು ಮಟ್ಟಿಗೆ ಈಗ ಅಂತ್ಯವಾಗಿದೆ.
ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ರಾಜೀನಾಮೆ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಗೆ ‘ಕೈ’ ಕೊಟ್ಟಿದ್ದಾರೆ.
ಮಾರ್ಚ್ 6 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಲಿದ್ದಾರೆ. ಬಿಜೆಪಿ ಮಹಾ ಸಮಾವೇಶದಲ್ಲಿ ಉಮೇಶ್ ಜಾಧವ್ ಅವರನ್ನು ಅಧಿಕೃತವಾಗಿ ಮೋದಿ ಸಮ್ಮುಖದಲ್ಲಿ ಪಕ್ಷ ಸೇರಿಸಿಕೊಳ್ಳಲು ಕಮಲ ಪಾಳಯ ರೆಡಿಯಾಗಿದೆ.
ಮೋದಿ ಅವರ ಜನಪರ ಯೋಜನೆ, ಕಾರ್ಯವೈಖರಿ ಮೆಚ್ಚಿ ಬಿಜೆಪಿ ಸೇರುತ್ತಿರುವುದಾಗಿ ಹೇಳಿರುವ ಉಮೇಶ್ ಜಾಧವ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್ ನ ಹಿರಿಯ ಮುತ್ಸದ್ಧಿ , ಸಂಸದ. ಮಲ್ಲಿಕಾರ್ಜುನ ಖರ್ಗೆ ಪ್ರತಿಸ್ಪರ್ಧಿಯಾಗಿ ಜಾಧವ್ ಕಣಕ್ಕೆ ಇಳಿಯಲಿದ್ದಾರೆ.
9 ಬಾರಿ ಶಾಸಕರಾಗಿ 2 ಬಾರಿ ಸಂಸದರಾಗಿ ಜನಾದೇಶ ಪಡೆದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಸೆಣೆಸಲು ರೆಡಿಯಾಗಿರೋ ಉಮೇಶ್ ಜಾಧವ್ 2 ಬಾರಿ ಶಾಸಕರಾಗಿ ಜನಾದೇಶ ಪಡೆದಿದ್ದವರು. ಇದೀಗ ವಿಧಾನಸಭೆ ಸಾಕು ಅಂತ ಲೋಕಸಭೆಯತ್ತ ಚಿತ್ತ ಹರಿಸಿದ್ದು, ಅವರು ಅಂದುಕೊಂಡಂತಾ ಸುಲಭ ಗೆಲುವು ಅಂತು ಸಾಧ್ಯವೇ ಇಲ್ಲ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...