ಜೆಡಿಎಸ್ ಶಾಸಜ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾ‍ಟ

Date:

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದು, ಕಿಟಕಿ ಗಾಜು ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ (ಅ.7) ನಡೆದಿದೆ.ಅಪರಿಚಿತ ಯುವಕರ ಗುಂಪೊಂದು ಕ್ಷುಲ್ಲಕ ಕಾರಣಕ್ಕಾಗಿ ಕಲ್ಲು ಎಸೆದಿರುವುದಾಗಿ ತಿಳಿದು ಬಂದಿದೆ. ಪಾಂಡವಪುರ ಪಟ್ಟಣದ ಐದು ದೀಪ ವೃತ್ತದಲ್ಲಿ ಶಾಸಕ ಸಿ.ಎಸ್. ಪುಟ್ಟರಾಜು ಹುಟ್ಟುಹಬ್ಬದ ಅಂಗವಾಗಿ ಬೆಂಬಲಿಗರು ಹಾಕಿದ್ದ ಫ್ಲೆಕ್ಸ್ ಹರಿದು ವಿಕೃತಿ ಮೆರೆದಿದ್ದಾರೆ.

ಪಾಂಡವಪುರ ಪಟ್ಟಣದಲ್ಲಿ ಕಳೆದ ರಾತ್ರಿ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಸೇರಿದಂತೆ ಎಂಟು ಕಾರು, ಹೋಂಡಾ ಶೋರೂಂ, ಖಾಸಗಿ ಬಸ್ ಸೇರಿದಂತೆ ಅನೇಕ ಸ್ಥಳಗಳಿಗೆ ಅಪರಿಚಿತ ಯುವಕರ ಗುಂಪೊಂದು ಕಲ್ಲು ಎಸೆದು, ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಘಟನೆ ನಡೆದಿದೆ.

 

ಪಾಂಡವಪುರ ಟೌನ್ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಕಾರಿಗೆ ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಲಾಗಿದೆ. ಪೊಲೀಸ್ ಠಾಣೆ ರಸ್ತೆಯಲ್ಲಿರುವ ಮೂರು ಕಾರಿಗೆ ಕಲ್ಲು ಎಸೆದು ಗಾಜು ಪುಡಿ ಮಾಡಿ ಡ್ಯಾಮೇಜ್ ಮಾಡಿರುವ ಘಟನೆ ನಡೆದಿರುವುದು ಕಾರಿನ‌ ಮಾಲೀಕರಲ್ಲಿ ಆತಂಕ ಉಂಟುಮಾಡಿದೆ.

ಮಾರುತಿ, ಇಂಡಿಕಾ, ಖಾಸಗಿ ಬಸ್ ಕಾರು, ಶಾಸಕರ ನಿವಾಸದ ಗಾಜು, ಹೋಂಡಾ ಶೋರೂಂ ಸೇರಿದಂತೆ ಅನೇಕ ಸ್ಥಳಗಳಲ್ಲಿ ಅಪರಿಚಿತ ಯುವಕರ ಗುಂಪೊಂದು ಸೈಜು ಕಲ್ಲು ಎಸೆದು ಗಾಜು ಪುಡಿ ಮಾಡಿ, ಕಾರನ್ನು ಡ್ಯಾಮೇಜ್ ಮಾಡಿದ್ದಾರೆ. ಕಿಡಿಗೇಡಿಗಳ ದುಷ್ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುಟ್ಟರಾಜು ಸಹೋದರ ಅಶೋಕ್ ಹೇಳಿಕೆ ನೀಡಿದ್ದು, “ಇದು ನಮ್ಮನ್ನು ಟಾರ್ಗೆಟ್ ಮಾಡಿರುವುದು ಅಲ್ಲ. ಯಾರೋ ಕುಡುಕರು ಈ ಕೃತ್ಯವೆಸಗಿದ್ದಾರೆ. ಯಾವುದೇ ಅಪಾಯವಿಲ್ಲ,” ಎಂದು ತಿಳಿಸಿದ್ದಾರೆ.

“ಗುರುವಾರ ರಾತ್ರಿ ಮೂವರು ಕುಡಿದು ಪೆಟ್ರೋಲ್ ಬಂಕ್ ಬಳಿ ಗಲಾಟೆ ಮಾಡಿಕೊಂಡಿದ್ದಾರೆ. ನಂತರ ಸುಮಾರು ಕಾರು, ಮನೆಗಳ ಮೇಲೆ ಕಲ್ಲು ತೂರಿದ್ದಾರೆ. ಈ ವೇಳೆ ನಮ್ಮ ಮನೆಗೂ ಕಲ್ಲು ತೂರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದು, ಕಾರ್ಯಕರ್ತರು ಯಾರು ಭಯಪಡುವ ಅವಶ್ಯಕತೆ ಇಲ್ಲ,” ಎಂದಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...