ಜೋರಾಗಿ ಮ್ಯೂಸಿಕ್ ಹಾಕಿದ ಪ್ರಕರಣ: ಹಲ್ಲೆಗೊಳಗಾಗಿದ್ದ ಅಂಗಡಿ ಮಾಲೀಕನ ವಿರುದ್ಧ ಮತ್ತೊಂದು ಕೇಸ್ ದಾಖಲು

Date:

ಬೆಂಗಳೂರು: ನಗರ್ತಪೇಟೆಯ ಮೊಬೈಲ್ ಬಿಡಿ ಭಾಗಗಳ ಮಾರಾಟ ಅಂಗಡಿಯೊಂದರಲ್ಲಿ ಭಕ್ತಿಗೀತೆ ಹಾಕಿದ ವಿಚಾರಕ್ಕಾಗಿ ಮಾಲೀಕನ ಮೇಲೆ ಹಲ್ಲೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ‌. ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿರುವ ಕೃಷ್ಣಾ ಟೆಲಿಕಾಂ ಶಾಪ್ ಮಾಲೀಕ ಹಾಗೂ ಹಲ್ಲೆಗೊಳಗಾದ ಮುಖೇಶ್ ವಿರುದ್ಧ ಬಂಧಿತ ಆರೋಪಿ ಸುಲೇಮಾನ್ ತಂದೆ ಜಬೀನ್ ಎಂಬುವರು ನೀಡಿದ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ‌.

ದೂರಿನಲ್ಲಿ ಏನಿದೆ ?
ನ್ಯಾಯಾಲಯ ಸೂಚನೆ ಮೇರೆಗೆ ಮುಕೇಶ್ ವಿರುದ್ಧ ಎಫ್ಐಅರ್ ದಾಖಲಾಗಿದೆ.
ರಂಜಾನ್‌ ಹಿನ್ನೆಲೆಯಲ್ಲಿ ಸಿದ್ದಣ್ಣ ಗಲ್ಲಿಯಲ್ಲಿರುವ ಜುಮ್ಮಾ ಮಸೀದಿಗೆ ಪುತ್ರ ಸುಲೇಮಾನ್ ಹಾಗೂ ಸಹಚರೊಂದಿಗೆ ಪ್ರಾರ್ಥನೆ ಹೋಗುವಾಗ ಕೃಷ್ಣಾ ಟೆಲಿಕಾಂ ಶಾಪ್ ನಲ್ಲಿ ಕಳೆದ ಮೂರು ದಿನಗಳಿಂದ ಜೋರಾಗಿ ಮ್ಯೂಸಿಕ್ ಸಿಸ್ಟಂ ಹಾಡನ್ನ ಹಾಕಿರುವ ಪ್ರಶ್ನಿಸಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ‌ ಪ್ರತಿದಿನ ಸುಮಾರು 3 ಸಾವಿರ ಮಂದಿ ಪ್ರಾರ್ಥನೆಗಾಗಿ ಈ ರಸ್ತೆಗೆ ಬರುತ್ತಾರೆ.ಇದರಿಂದ ಅವರಿಗೆಲ್ಲ ತೊಂದರೆಯಾಗಲಿದೆ‌ ಎಂದು ಹೇಳಿದಾಗ ಏಕಾಏಕಿ ಮುಕೇಶ್, ಸುಲೇಮಾನ್ ಹಾಗೂ ಸಹಚರರ ಮೇಲೆ ಹಲ್ಲೆ‌ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಮುಕೇಶ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಅಂದು ಆಗಿದ್ದೇನು ?
ಮಾರ್ಚ್ 17 ರಂದು ಅಂಗಡಿಯಲ್ಲಿ ಜೋರಾಗಿ ಮ್ಯೂಸಿಕ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಕೇಶ್ ಮೇಲೆ ಹಲ್ಲೆ‌ ಮಾಡಿದ ಆರೋಪದಡಿ ಸುಲೇಮಾನ್, ಶಹವಾಜ್, ತರುಣ್, ರೋಹಿತ್ ಸೇರಿ ಹಲವರನ್ನ ಬಂಧಿಸಲಾಗಿತ್ತು. ಹಲ್ಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಬಿಜೆಪಿಯ ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಹಾಗೂ ಪಿ.ಸಿ.ಮೋಹನ್ ನೇತೃತ್ವದ ಬಿಜೆಪಿ ನಿಯೋಗ ಸ್ಥಳದಲ್ಲೇ ಜಮಾಯಿಸಿ ಭಾರೀ ಪ್ರತಿಭಟನೆ ಮಾಡಿದ್ದರು. ಈ ವೇಳೆ ನಗರ್ತಪೇಟೆಯಲ್ಲಿ ಅಂಗಡಿ-ಮುಂಗಟ್ಟು ಬಂದ್ ಆಗಿತ್ತು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...