ಟೀಮ್​ ಇಂಡಿಯಾದ ನಾಯಕನಾದ ಕನ್ನಡಿಗ ಕೆ.ಎಲ್ ರಾಹುಲ್..!

Date:

ಯುವ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಟೀಮ್ ಇಂಡಿಯಾ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನೆಡೆಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರಿಂದ ರಾಹುಲ್ ನಾಯಕತ್ವದ ಜವಬ್ದಾರಿಯನ್ನು ಹೊರಬೇಕಾಯಿತು. ಅನಿರೀಕ್ಷಿತವಾಗಿ ಸಿಕ್ಕ ಹೊಸ ಹೊಣೆಯನ್ನು ರಾಹುಲ್ ನಿಭಾಯಿಸಿದರು. ಭಾರತ 7 ರನ್​ ಗಳಿಂದ ಗೆಲುವು ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಾಯಕ ರೋಹಿತ್ ಶರ್ಮಾ (ಅಜೇಯ 60/ ಗಾಯಗೊಂಡು ನಿವೃತ್ತಿ) ಮತ್ತು ರಾಹುಲ್ (45) ಉತ್ತಮ ಆಟದ ನೆರವಿನಿಂದ ಭಾರತ 20 ಓವರ್​ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 163ರನ್ ಗಳನ್ನು ಮಾಡಿತು. ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ನಿಗದಿತ ಓವರ್ಗಳಲ್ಲಿ 9 ವಿಕೆಟ್​ಗೆ 156ರನ್ ಮಾತ್ರ ಗಳಿಸಲು ಸಾಧ್ಯವಾಯಿತು. ವಿಕೆಟ್ ಕೀಪರ್ ಟಿಮ್ ಸೀಫರ್ಟ್ (50) ಹಾಗೂ ರಾಸ್ ಟೇಲರ್ (53) ಹೊರತುಪಡಿಸದರೆ ಯಾರೂ ಉತ್ತಮ ರೀತಿಯಲ್ಲಿ ಬ್ಯಾಟ್ ಬೀಸಲಿಲ್ಲ.
ಈಗಾಗಲೇ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸಬಲ್ಲೆ ಎಂದು ಸಾಬೀತು ಪಡಿಸಿರುವ ಕೆ.ಎಲ್ ರಾಹುಲ್, ವಿಕೆಟ್ ಕೀಪರ್ ಆಗಿಯೂ ಸೈ ಎನಿಸಿಕೊಂಡಿದ್ದಾರೆ. ಇದೀಗ ಟೀಮ್ ಇಂಡಿಯಾದ ಸಾರಥಿಯಾಗಿಯೂ ಯಶಸ್ವಿಯಾಗಿ ಜವಬ್ದಾರಿ ನಿಭಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...