ಟೀಮ್ ಇಂಡಿಯಾಕ್ಕೆ ಧೋನಿ ಅವಶ್ಯಕತೆ ಇದೆ ಎಂದ ಭಾರತದ ಸ್ಟಾರ್ ಆಟಗಾರ..!

Date:

2019ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​​ ಬಳಿಕ ಟೀಮ್ ಇಂಡಿಯಾದಿಂದ ದೂರ ಉಳಿದಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಗೆ ಕಾಲ ಸನ್ನಿಹಿತವಾಗಿದೆ ಎಂದೇ ಹೇಳಲಾಗುತ್ತಿದೆ. ಧೋನಿಯ ಅನುಪಸ್ಥಿತಿ ಆಗಾಗ ಕಾಡುತ್ತಿದ್ದರೂ ಯುವ ಆಟಗಾರರು ನಿರೀಕ್ಷೆಯನ್ನು ಹುಸಿಯಾಗಿಸದೆ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆದರೂ ಧೋನಿ ಧೋನಿಯೇ ಬಿಡ್ರಿ.


ಧೋನಿ ಈ ಸರಣಿಗೆ ಆಯ್ಕೆ ಆಗ್ತಾರೆ.. ಮುಂದಿನ ಸರಣಿಗೆ ಕಮ್​ಬ್ಯಾಕ್ ಮಾಡ್ತಾರೆ.. ಟಿ20 ವರ್ಲ್ಡ್​​​ಕಪ್​ನಲ್ಲಿ ಪಕ್ಕಾ ಕಣಕ್ಕಿಳಿಯುತ್ತಾರೆ ಎಂದು ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಈ ನಡುವೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರ ಪೈಕಿ ಒಬ್ಬರಾದ, ಸದ್ಯ ತಂಡದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವ ಎಡಗೈ ಬ್ಯಾಟ್ಸ್​ಮನ್​ ಸುರೇಶ್ ರೈನಾ ಧೋನಿ ಬಗ್ಗೆ ಮಾತಾಡಿದ್ದಾರೆ. ಧೋನಿಯ ಆತ್ಮೀಯ ಗೆಳೆಯರೂ ಆಗಿರುವ ರೈನಾ ಧೋನಿ ನಿವೃತ್ತಿಯನ್ನು ತೆಗೆದುಕೊಳ್ಳಬೇಕೆಂದು ಡಿಸೈಡ್ ಮಾಡಿದ್ರೆ ಯಾವ್ದೇ ದೊಡ್ಡ ಸಂಚಲನ ಉಂಟು ಮಾಡಲು ಬಯಸಲ್ಲ. ನಾನು ಧೋನಿ ಮತ್ತೆ ತಂಡದಲ್ಲಿ ಆಡುವುದನ್ನು ಬಯಸುತ್ತೇನೆ. ತಂಡಕ್ಕೆ ಅವರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
33 ವರ್ಷದ ಸುರೇಶ್ ರೈನಾ ಕಳೆದ ಐಪಿಎಲ್​ ಬಳಿಕ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಈ ಬಾರಿಯ ಐಪಿಎಲ್​ನಲ್ಲಿ ಮಿಂಚಿ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಆಗುವ ತುಡಿತದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...