ಟೀಮ್ ಇಂಡಿಯಾಕ್ಕೆ ಧೋನಿ ಅವಶ್ಯಕತೆ ಇದೆ ಎಂದ ಭಾರತದ ಸ್ಟಾರ್ ಆಟಗಾರ..!

Date:

2019ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​​ ಬಳಿಕ ಟೀಮ್ ಇಂಡಿಯಾದಿಂದ ದೂರ ಉಳಿದಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಗೆ ಕಾಲ ಸನ್ನಿಹಿತವಾಗಿದೆ ಎಂದೇ ಹೇಳಲಾಗುತ್ತಿದೆ. ಧೋನಿಯ ಅನುಪಸ್ಥಿತಿ ಆಗಾಗ ಕಾಡುತ್ತಿದ್ದರೂ ಯುವ ಆಟಗಾರರು ನಿರೀಕ್ಷೆಯನ್ನು ಹುಸಿಯಾಗಿಸದೆ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆದರೂ ಧೋನಿ ಧೋನಿಯೇ ಬಿಡ್ರಿ.


ಧೋನಿ ಈ ಸರಣಿಗೆ ಆಯ್ಕೆ ಆಗ್ತಾರೆ.. ಮುಂದಿನ ಸರಣಿಗೆ ಕಮ್​ಬ್ಯಾಕ್ ಮಾಡ್ತಾರೆ.. ಟಿ20 ವರ್ಲ್ಡ್​​​ಕಪ್​ನಲ್ಲಿ ಪಕ್ಕಾ ಕಣಕ್ಕಿಳಿಯುತ್ತಾರೆ ಎಂದು ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ. ಈ ನಡುವೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರ ಪೈಕಿ ಒಬ್ಬರಾದ, ಸದ್ಯ ತಂಡದಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವ ಎಡಗೈ ಬ್ಯಾಟ್ಸ್​ಮನ್​ ಸುರೇಶ್ ರೈನಾ ಧೋನಿ ಬಗ್ಗೆ ಮಾತಾಡಿದ್ದಾರೆ. ಧೋನಿಯ ಆತ್ಮೀಯ ಗೆಳೆಯರೂ ಆಗಿರುವ ರೈನಾ ಧೋನಿ ನಿವೃತ್ತಿಯನ್ನು ತೆಗೆದುಕೊಳ್ಳಬೇಕೆಂದು ಡಿಸೈಡ್ ಮಾಡಿದ್ರೆ ಯಾವ್ದೇ ದೊಡ್ಡ ಸಂಚಲನ ಉಂಟು ಮಾಡಲು ಬಯಸಲ್ಲ. ನಾನು ಧೋನಿ ಮತ್ತೆ ತಂಡದಲ್ಲಿ ಆಡುವುದನ್ನು ಬಯಸುತ್ತೇನೆ. ತಂಡಕ್ಕೆ ಅವರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
33 ವರ್ಷದ ಸುರೇಶ್ ರೈನಾ ಕಳೆದ ಐಪಿಎಲ್​ ಬಳಿಕ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಈ ಬಾರಿಯ ಐಪಿಎಲ್​ನಲ್ಲಿ ಮಿಂಚಿ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಆಗುವ ತುಡಿತದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...