ಟೀಮ್ ಇಂಡಿಯಾದಲ್ಲಿ ಸರಿಯಾದ ಅವಕಾಶ ಕೊಡ್ತಿಲ್ಲ : ಚಾಹಲ್

Date:

ತನಗೆ ಮತ್ತು ಕುಲ್‌ದೀಪ್ ಯಾದವ್‌ಗೆ ಟೀಂ ಇಂಡಿಯಾ ತಂಡದಲ್ಲಿ ಸತತವಾಗಿ ಆಡುವ ಅವಕಾಶ ಸಿಗದಿರುವುದರ ಬಗ್ಗೆ ಯುಜುವೇಂದ್ರ ಚಹಾಲ್ ಮೌನ ಮುರಿದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸೋಲನ್ನು ಕಂಡಿತ್ತು. ಹೀಗಾಗಿ ಪಂದ್ಯದ ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದ ಚಹಾಲ್ ಮತ್ತು ಕುಲ್‌ದೀಪ್ ಇಬ್ಬರನ್ನೂ ತಂಡದಿಂದ ಹೊರಗಿಡಲಾಯಿತು.

ಆ ಪಂದ್ಯದ ಬಳಿಕ ಯುಜುವೇಂದ್ರ ಚಹಾಲ್ ಮತ್ತು ಕುಲ್‌ದೀಪ್ ಯಾದವ್ ಒಂದೇ ಪಂದ್ಯದಲ್ಲಿ ಆಡುವ ಅವಕಾಶವನ್ನೇ ಪಡೆದಿಲ್ಲ. ಯಾವುದಾದರೂ ಸರಣಿಗೆ ಯುಜುವೇಂದ್ರ ಚಹಾಲ್ ಮತ್ತು ಕುಲ್‌ದೀಪ್ ಯಾದವ್ ಇಬ್ಬರೂ ಆಯ್ಕೆಯಾದರೂ ಸಹ ಅರ್ಧದಷ್ಟು ಪಂದ್ಯಗಳಲ್ಲಿ ಚಹಾಲ್ ಮತ್ತು ಉಳಿದ ಪಂದ್ಯಗಳಲ್ಲಿ ಕುಲ್‌ದೀಪ್ ಆಡುವ ಅನಿವಾರ್ಯತೆ ಉಂಟಾಗಿದೆ. ಇದೀಗ ಯುಜುವೇಂದ್ರ ಚಹಾಲ್ ತಾನು ಮತ್ತು ಕುಲ್‌ದೀಪ್ ಒಟ್ಟಿಗೆ ತಂಡದಲ್ಲಿ ಆಡದೆ ಇರುವುದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

 

‘ನಾನು ಮತ್ತು ಕುಲ್‌ದೀಪ್ ಸರಣಿಗೆ ಆಯ್ಕೆಯಾದರೂ ಹಾರ್ದಿಕ್ ಪಾಂಡ್ಯ ತಂಡದಲ್ಲಿರುವ ಕಾರಣ ಇಬ್ಬರಲ್ಲೊಬ್ಬರು ಬೆಂಚ್ ಕಾಯುವ ಪರಿಸ್ಥಿತಿ ಎದುರಾಗುತ್ತದೆ. 2018ರಲ್ಲಿ ಹಾರ್ದಿಕ್ ಪಾಂಡ್ಯ ಗಾಯಕ್ಕೊಳಗಾಗಿ ತಂಡದಿಂದ ಹೊರಗುಳಿದಾಗ ರವೀಂದ್ರ ಜಡೇಜಾ ಮತ್ತೆ ಟೀಮ್ ಇಂಡಿಯಾವನ್ನು ಸೇರಿಕೊಂಡರು, ಅವರೂ ಕೂಡ ಸ್ಪಿನ್ನರ್ ಆದಕಾರಣ ಕುಲ್‌ದೀಪ್ ಮತ್ತು ನಾನು ಇಬ್ಬರಲ್ಲೊಬ್ಬರು ಮಾತ್ರ ತಂಡದಲ್ಲಿ ಆಡುವ ಅವಕಾಶವನ್ನು ಪಡೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಹೀಗಾಗಿ 5 ಪಂದ್ಯಗಳ ಸರಣಿಯಲ್ಲಿ 3 ಪಂದ್ಯಗಳಲ್ಲಿ ನನಗೆ ಅವಕಾಶ ದೊರೆತರೆ ಉಳಿದ ಪಂದ್ಯಗಳಲ್ಲಿ ಕುಲ್‌ದೀಪ್ ಅವಕಾಶ ಪಡೆಯುತ್ತಾರೆ ಅಥವಾ ಕುಲ್‌ದೀಪ್ 3 ಪಂದ್ಯಗಳನ್ನಾಡಿದರೆ ನಾನು 2 ಪಂದ್ಯಗಳನ್ನಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಯುಜುವೇಂದ್ರ ಚಹಾಲ್ ತಾನು ಮತ್ತು ಕುಲ್‌ದೀಪ್ ಯಾದವ್ ಯಾಕೆ ಒಂದೇ ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬುದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...