ಠಾಣೆಗೆ ಬಂದ ಹಂಸಲೇಖ; ಆತಂಕದ ವಾತಾವರಣ

Date:

ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಾ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಪೇಜಾವರ ಶ್ರೀ ಕುರಿತ ಹೇಳಿಕೆ ವಿಚಾರವಾಗಿ ಹಂಸಲೇಖಾ ವಿರುದ್ಧ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಪೊಲೀಸರು ನೋಟೀಸ್ ನೀಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ವಿಚಾರಣೆಗೆ ಹಂಸಲೇಖಾ ಹಾಜರಾಗಿರಲಿಲ್ಲ. ಇದೀಗ ಹಂಸಲೇಖಾ ವಿಚಾರಣೆಗೆ ಹಾಜರಾಗಿದ್ದಾರೆ.

ಈ ನಡುವೆ ಬಸವನಗುಡಿ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆಯುತ್ತಿದ್ದು, ನಟ ಚೇತನ್ ಕೂಡ ಠಾಣೆಗೆ ಆಗಮಿಸಿದ್ದಾರೆ. ಕನ್ನಡಪರ ಸಂಘಟನೆಗಳು ನಟ ಚೇತನ್ ಪರ ಹಾಗೂ ಹಂಸಲೇಖಾ ಪರ ನಾವಿದ್ದೇವೆ ಎಂದು ಘೋಷಣೆ ಕೂಗುತ್ತಿದ್ದರೆ ಇನ್ನೊಂದೆಡೆ ಭಜರಂಗದಳ ಕಾರ್ಯಕರ್ತರು ಕೂಡ ಠಾಣೆ ಮುಂದೆ ಜಮಾವಣೆಗೊಂಡಿದ್ದು ಹಂಸಲೇಖಾ ವಿರುದ್ಧ ಘೋಷಣೆ ಕೂಗಿದ್ದಾರೆ.

ಠಾಣೆಗೆ ಆಗಮಿಸುತ್ತಿದ್ದ ನಟ ಚೇತನ್ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...