ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್’ಚಿಟ್

Date:

ಚಾಮರಾಜನಗರ: ವೀರಪ್ಪನ್ ಕೇಸ್ ಗಳಲ್ಲಿ ಆರೋಪಿಯಾಗಿದ್ದ ಸ್ಪೆಲ್ಲಾ ಮೇರಿ ಖುಲಾಸೆಯಾಗಿದೆ. ಹೌದು ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣದಲ್ಲಿ ಸ್ಟೆಲ್ಲಾಮೇರಿ ಆರೋಪಿಯಾಗಿದ್ದಳು. ಇದೀಗಾ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಚಾಮರಾಜನಗರ ಬಾಲ ನ್ಯಾಯಮಂಡಳಿ ಆದೇಶ ಹೊರಡಿಸಿದೆ. 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾಮೇರಿಯನ್ನು ಬಂಧಿಸಲಾಗಿತ್ತು. ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಪೊಲೀಸರು ಬಂಧಿಸಿದ್ದರು.
ಮಾನವ ಹಕ್ಕುಗಳ ಸಂಘಟನೆಗಳು ಸ್ಟೆಲ್ಲಾಮೇರಿ ಬಂಧನ ಪ್ರಶ್ನಿಸಿದ್ದವು. ಸ್ಟೆಲ್ಲಾಮೇರಿ ಬಿಡುಗಡೆ ಮಾಡಿ ಪ್ರಕರಣವನ್ನು ಬಾಲ ನ್ಯಾಯ ಮಂಡಳಿಗೆ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಹಿಸಿತ್ತು. ಪಾಲಾರ್ ಬಾಂಬ್ ಸ್ಫೋಟ ಮತ್ತು ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ನಡೆದಾಗ ಸ್ಟೆಲ್ಲಾಮೇರಿ ಅಪ್ರಾಪ್ತೆ ಎಂದು ಮಾನವ ಹಕ್ಕುಗಳ ಸಂಘಟನೆ ವಾದವಾಗಿತ್ತು.
ಸ್ಟೆಲ್ಲಾಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ ಎಂಬಾತ ಅಪಹರಿಸಿ ಮದುವೆಯಾಗಿದ್ದ ಎಂದು ಪ್ರತಿಪಾದಿಸಿದ್ದಾರೆ. ಪೊಲೀಸ್ ಎನ್ಕೌಂಟರ್ನಲ್ಲಿ ಸುಂಡವಲಿಯಾರ್ ಬಲಿಯಾಗಿದ್ದಾನೆ. ವಾದ ಪುರಸ್ಕರಿಸಿದ ಬಾಲ ನ್ಯಾಯ ಮಂಡಳಿ ಸ್ಟೆಲ್ಲಾಮೇರಿಯನ್ನು ಆರೋಪಗಳಿಂದ ಮುಕ್ತಗೊಳಿಸಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...