ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

Date:

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಈಗಾಗಲೇ ಚಾರ್ಜ್ ಫ್ರೇಮ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕೋರ್ಟ್ ಆರೋಪಗಳ ಪಟ್ಟಿ ಓದಿ ಕೇಳಿಸಿದಾಗ, ಆರೋಪಿಗಳು “ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದರು.

ಈ ಹಂತದ ನಂತರ ವಿಚಾರಣೆಯನ್ನು ನವಂಬರ್ 10 (ಇಂದು)ಕ್ಕೆ ಮುಂದೂಡಲಾಗಿತ್ತು. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಯಲ್ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಕಳೆದ ವಿಚಾರಣೆಯಲ್ಲಿ ಕೋರ್ಟ್ ಆರೋಪಿಗಳ ವಿರುದ್ಧದ ಆರೋಪ ಪತ್ರ ಆಧರಿಸಿ ಚಾರ್ಜ್ ಫ್ರೇಮ್ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಇದೀಗ ಮುಂದಿನ ಹಂತವಾಗಿ ವಿಚಾರಣೆ ಪ್ರಾರಂಭಿಸಲು ದಿನಾಂಕ ಘೋಷಣೆಗೆ ನಿರೀಕ್ಷೆ ಇದೆ.

ಎಲ್ಲಾ ಆರೋಪಿಗಳಿಗೆ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ನಟ ದರ್ಶನ್ ಸೇರಿದಂತೆ ಆರು ಮಂದಿ ಆರೋಪಿಗಳು ಜೈಲಿನಿಂದಲೇ ವಿಡಿಯೋ ಕಾಲ್ ಮೂಲಕ ಹಾಜರಾಗಲಿದ್ದಾರೆ. ಉಳಿದ ಆರೋಪಿಗಳು ನೇರವಾಗಿ ಕೋರ್ಟ್‌ಗೆ ಹಾಜರಾಗಲಿದ್ದಾರೆ.

ಈ ಪ್ರಕರಣದ ವಿಚಾರಣೆ ಬೆಂಗಳೂರು 64ನೇ ಎಸಿಸಿಹೆಚ್ (CCH-64) ಕೋರ್ಟ್‌ನಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ನಡೆಯಲಿದ್ದು, ನ್ಯಾಯಾಲಯ ಇಂದು ಟ್ರಯಲ್ ಆರಂಭದ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರ ತನಿಖೆ ಪೂರ್ಣಗೊಂಡಿದ್ದು, ಇದೀಗ ನ್ಯಾಯಾಂಗ ಪ್ರಕ್ರಿಯೆ ಪ್ರಮುಖ ಹಂತಕ್ಕೆ ಪ್ರವೇಶಿಸಿದೆ.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...