ಡಿ ಬಾಸ್ ಗುಡುಗಿಗೆ ಹೆದರಿದ ತೆಲುಗು ಮಂದಿ!

Date:

ದರ್ಶನ್ ಅಭಿನಯದ ರಾಬರ್ಟ್ ಚಿತ್ರ ತೆಲುಗಿನಲ್ಲಿಯೂ ಸಹ ಬಿಡುಗಡೆಯಾಗಲು ತಯಾರಾಗಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಆದರೆ ತೆಲುಗು ರಾಬರ್ಟ್ ಬಿಡುಗಡೆಗೆ ತೆಲುಗು ರಾಜ್ಯಗಳಲ್ಲಿ ವಿತರಕರು ತೊಂದರೆಯನ್ನು ಉಂಟು ಮಾಡಿದ್ದರು. ಈ ವಿಷಯ ತಿಳಿದ ಕೂಡಲೇ ರಾಬರ್ಟ್ ಚಿತ್ರತಂಡ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಿಡಿದೆದ್ದರು.

 

ನಿಮ್ಮ ಸಿನಿಮಾಗಳನ್ನು ನಮ್ಮ ರಾಜ್ಯಗಳಲ್ಲಿ ಯಾವುದೇ ವಿಘ್ನವಿಲ್ಲದೆ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ನಮ್ಮ ಚಿತ್ರಗಳಿಗೇಕೆ ಈ ರೀತಿ ತೊಂದರೆ ಉಂಟು ಮಾಡುತ್ತಿದ್ದೀರ ಎಂದು ತೆಲುಗು ಮಂದಿ ವಿರುದ್ಧ ದರ್ಶನ್ ಅವರು ಗರಂ ಆದರು. ಅಷ್ಟೇ ಅಲ್ಲದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದರ್ಶನ್ ಅವರು ದೂರನ್ನು ನೀಡಿದರು.

 

ದರ್ಶನ್ ಅವರು ಈ ವಿಷಯದ ಕುರಿತು ಅಸಮಾಧಾನ ವ್ಯಕ್ತಪಡಿಸಿ ಹೋರಾಟಕ್ಕೆ ಇಳಿದಿದ್ದೇ ತಡ ತೆಲುಗು ವಿತರಕರಿಗೆ ನಡುಕ ಉಂಟಾಯಿತು. ರಾಬರ್ಟ್ ತೆಲುಗು ಸಿನಿಮಾ ಬಿಡುಗಡೆಗೆ ಅಡ್ಡಿ ಪಡಿಸಿದವರು ದರ್ಶನ್ ಅವರ ಬಳಿ ಕ್ಷಮೆ ಕೇಳಿ ಈ ಹಿಂದೆ ನಿಗದಿಪಡಿಸಿದಂತೆ ಮಾರ್ಚ್ ಹನ್ನೊಂದನೇ ತಾರೀಕಿನಂದು ರಾಬರ್ಟ್ ತೆಲುಗು ವರ್ಷನ್ ಸಹ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

 

 

ಒಟ್ಟಿನಲ್ಲಿ ಡಿ ಬಾಸ್ ಹೋರಾಟಕ್ಕೆ ಇಳಿದಿದ್ದೇ ತಡ ತೆಲುಗು ವಿತರಕರು ಭಯಪಟ್ಟು ದರ್ಶನ್ ಅವರ ರಾಬರ್ಟ್ ತೆಲುಗು ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...