ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಪೊಲೀಸರ ಅತಿಥಿಯಾದ ಅಪ್ಪ..!

Date:

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ: ಪೊಲೀಸರ ಅತಿಥಿಯಾದ ಅಪ್ಪ..!

ಬೆಂಗಳೂರು: ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಸಹ ತಾಯಿಗಿಂತ ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಹೊಂದಿರುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ಅಪ್ಪ ಎಂಬ ಪದಕ್ಕೆ ಮಸಿ ಬಳಿದಿದ್ದಾನೆ. ಮಗಳು ಎನ್ನುವುದನ್ನು ನೋಡದೇ ತಂದೆಯೇ ಆಕೆ ಮೇಲೆ ತನ್ನ ವಿಕೃತ ಕಾಮದ ತೀಟೆ ತೀರಿಸಿಕೊಂಡಿದ್ದಾನೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ತನ್ನ 19 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಚಾಲಕನಾಗಿದ್ದ ತಂದೆ ಈ ಕೃತ್ಯ ಎಸಗಿದ್ದಾನೆ ಎಂದು ಸ್ವತಃ ಮಗಳೇ ಪೊಲೀಸ್ ಠಾಣೆಗೆ ಹೋಗಿ ತಂದೆ ವಿರುದ್ಧ ದೂರು ನೀಡಿದ್ದಾಳೆ.
ಈ ಪಾಪಿ ತಂದೆಗೆ ಮೂರು ಜನ ಮಕ್ಕಳಿದ್ದಾರೆ. ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ ಇದ್ದಾನೆ. ತನ್ನ ಹಿರಿಯ ಮಗಳ ಮೇಲೆ ತಂದೆ ನಿರಂತರವಾಗಿ‌ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ತಂದೆಯ ಕಿರುಕುಳ ತಾಳಲಾರದೆ ಯುವತಿ ಮನೆಯಿಂದ ದೂರ ಇದ್ದಳು. ಪಿಜಿಯಲ್ಲಿ ವಾಸಿಸಲು ಆರಂಭಿಸಿದ್ದಳು. ಆದರೆ ಆಗಲೂ ಈತ ಹಿಂದೆ ಕೊಡುತ್ತಿದ್ದನಂತೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿ ತಂದೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇದೇ ಭಯದಿಂದ ಮತ್ತು ತಂದೆ ಕಾಟ ತಾಳಲಾರದೇ ಯುವತಿ ಮನೆಯಿಂದ ದೂರ ಉಳಿದಿದ್ದಳು. ನಂತರ ನಿರಂತರ ಕಾಟ, ಮಾನಸಿಕ ಹಿಂಸೆ ತಾಳಲಾರದೇ ದೂರು ನೀಡುವ ನಿರ್ಧಾರ ಮಾಡಿದ್ದಾಳೆ. ಅಂಬೇಡ್ಕರ್ ಸೇವಾ ಸಮಿತಿ ಸಂಘಟನೆಯ ಸಹಾಯ ಪಡೆದು ಯುವತಿ ತಂದೆಯ ವಿರುದ್ಧ ದೂರು ದಾಖಲಿಸಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...