ತಮನ್ನಾ ಆಯ್ಕೆಗೂ ಮುನ್ನವೇ ರಶ್ಮಿಕಾ ಮಂದಣ್ಣ ಅವರನ್ನೂ ಕೇಳಿದ್ವಿ: ಸಚಿವ ಎಂ.ಬಿ ಪಾಟೀಲ್

Date:

 

ತಮನ್ನಾ ಆಯ್ಕೆಗೂ ಮುನ್ನವೇ ರಶ್ಮಿಕಾ ಮಂದಣ್ಣ ಅವರನ್ನೂ ಕೇಳಿದ್ವಿ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ತಮನ್ನಾ ಆಯ್ಕೆಗೂ ಮುನ್ನವೇ ರಶ್ಮಿಕಾ ಮಂದಣ್ಣ ಅವರನ್ನೂ ಕೇಳಿದ್ವಿ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೊಸ ಸೋಪುಗಳನ್ನು ಪರಿಚಯ ಮಾಡಿದ್ದೇವೆ.
ನಾವು ಈಗ ಪರ್ ಫ್ಯೂಮ್ ಮಾರ್ಕೆಟ್ಗೂ ಕಾಲಿಡ್ತಿದ್ದೇವೆ. ಇದು 5 ಸಾವಿರ ಕೋಟಿ ಬ್ಯುಸಿನೆಸ್ಗೆ ತೆಗೆದುಕೊಂಡು ಹೋಗುವ ಯೋಜನೆ ಇದೆ. ತಮನ್ನಾ ಆಯ್ಕೆಗೂ ಮುನ್ನವೇ ರಶ್ಮಿಕಾ ಮಂದಣ್ಣ ಅವರನ್ನೂ ಕೇಳಿದ್ವಿ, ಅವರು ಬೇರೆ ಕಡೆ ಸೈನ್ ಮಾಡಿದ್ದೇನೆ ಆಗಲ್ಲ ಅಂದ್ರು.
ಶ್ರೀಲೀಲಾ ಅವರನ್ನು ಸಂಪರ್ಕಿಸಿದ್ವಿ, ಅವ್ರು ಆಗಲ್ಲ ಅಂದ್ರು. ಪೂಜಾ ಗಾಂಧಿ, ಕಿಯಾರಾ ಅಡ್ವಾಣಿ ಅವರು ಕೂಡ ಆಗೋದಿಲ್ಲ ಬೇರೆ ಕಮೀಟ್ಮೆಂಟ್ ಇದೆ ಎಂದ್ರು. ಹಾಗಾಗಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದೇವೆ. ಕನ್ನಡಿಗರನ್ನ ನಾವು ಕೂಡ ಸಂಪರ್ಕಿಸಿದ್ವಿ, ಆದ್ರೆ ಅವ್ರು ಫ್ರೀ ಇರಲಿಲ್ಲ.
ಯಾರೇ ರಾಯಭಾರಿ ಆದ್ರೂ ಎರಡು ವರ್ಷ ಲಾಕ್ ಆಗ್ತಾರೆ. ದೀಪಿಕಾ ಪಡುಕೋಣೆ ನಮ್ಮ ಬಜೆಟ್ಗೆ ಎಟುಕದವರು, ಹೀಗಾಗಿ ಅವರನ್ನು ಸಂಪರ್ಕ ಮಾಡಿಲ್ಲ. ಕನ್ನಡಕ್ಕೆ ಅವಮಾನ ಮಾಡಬೇಕು ಅಂತ ಉದ್ದೇಶ ಇಲ್ಲ. ಮುಂದೆ ವಿದೇಶಿಯವರನ್ನೂ ರಾಯಭಾರಿಯಾಗಿ ಆಯ್ಕೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...