ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ತಮ್ಲುಕ್ ನಲ್ಲಿ ಪ್ರಚಾರ ಸಭೆ ನಡೆಸಿದ ಮೋದಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
“ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಬಂಗಾಳದ ಗ್ರಾಮಸ್ಥರ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ ಅಲ್ಲದೆ ರಾಮನವಮಿ ಸಮಯದಲ್ಲಿ ಶ್ರೀ ರಾಮನ ಜಾಥಾಕ್ಕೂ ಅವಕಾಶವನ್ನು ನೀಡಿಲ್ಲ ದಿದಿ ಗೆ ನಾನು ನೇರವಾಗಿ ಸವಾಲನ್ನು ಹಾಕುತ್ತೇನೆ.
“ನಾನು ಇಂದು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತೇನೆ ಅವರಿಗೆ ನಿಜವಾಗಿಯೂ ತಾಕತ್ತಿದ್ರೆ ನನ್ನನ್ನು ಬಂಧಿಸಿಸಲಿ ನೋಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೇರ ಸವಾಲೆಸೆದಿದ್ದಾರೆ.