ತಾಯಿ, ತಂಗಿಯನ್ನೇ ಕೆರೆಗೆ ತಳ್ಳಿ ಕೊಲೆ ಮಾಡಿದ ಯುವಕ

Date:

ಮೈಸೂರು: ಮೈಸೂರು ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಂದ ದಾರುಣ ಘಟನೆ ಜಿಲ್ಲೆ ಹುಣಸೂರು ತಾಲ್ಲೂಕಿನ ಮರೂರು ಗ್ರಾಮದಲ್ಲಿ ಜರುಗಿದೆ. ಕೆರೆಯಲ್ಲಿ ಮುಳುಗಿ ಸತ್ತವರನ್ನು 19-ವರ್ಷ-ವಯಸ್ಸಿನ ಯುವತಿ ಧನುಶ್ರೀ ಮತ್ತು 43-ವರ್ಷ ವಯಸ್ಸಿನ ಅನಿತಾ ಎಂದು ಗುರುತಿಸಲಾಗಿದೆ. ಅವರನ್ನು ಕೆರೆಗೆ ತಳ್ಳಿದ ಆರೋಪ ಹೊತ್ತಿರುವ ಯುವಕನ ಹೆಸರು ನಿತಿನ್.
ಅಗ್ನಿ ಶಾಮಕದಳ ಸಿಬ್ಬಂದಿ ಅನಿತಾ ಮತ್ತು ಧನುಶ್ರೀ ದೇಹಗಳನ್ನು ಹೊರತೆಗೆಯುವ ಪ್ರಯತ್ನದಲ್ಲಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಧನುಶ್ರೀ ಮತ್ತು ಅನಿತಾರನ್ನು ನೆಂಟರ ಮನೆಗೆ ಕರೆದೊಯ್ಯುವುದಾಗಿ ಹೇಳಿ ಕೆರೆದಡಕ್ಕೆ ಕರೆದುಕೊಂಡ ಬಂದ ನಿತಿನ್ ಇಬ್ಬರನ್ನೂ ಕೆರೆಗೆ ನೂಕಿದ ಎಂದು ಹೇಳಲಾಗಿದೆ. ಖುದ್ದು ನಿತಿನ್ ತನ್ನ ತಂದೆಗೆ ತಾಯಿ ಮತ್ತು ತಂಗಿಯನ್ನು ಕೆರೆಗೆ ನೂಕಿ ಕೊಂದಿದ್ದನ್ನು ಹೇಳಿ ಮನೆಯಲ್ಲಿ ಆರಾಮಾಗಿ ನಿದ್ರಿಸಿದನಂತೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...