ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...