ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...