ತುಮಕೂರಿನಲ್ಲಿ ಗೆಲುವಿನ ಮುಂಚೆಯೇ ಸಂಭ್ರಮಾಚರಣೆ !?

Date:

ಲೋಕಸಭಾ ಚುನಾವಣೆ ಮತ ಎಣಿಕೆ ಮುನ್ನಾ ದಿನವೇ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರು ಗೆದ್ದ ರೀತಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ!

ಬರೀ ಕಾರ್ಯಕರ್ತರು, ಬೆಂಬಲಿಗರಷ್ಟೇ ಅಲ್ಲ. ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರೂ ಕೂಡಾ ಅಷ್ಟೇ ಉತ್ಸುಕರಾಗಿದ್ದಾರೆ. ಮುಖಂಡರು ಸಂಭ್ರಮಾಚರಣೆಗೆ ಬೆಂಬಲಿಗರನ್ನು ಆಹ್ವಾನಿಸಿರುವ ಪೋಸ್ಟ್ ಕಾರ್ಡ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ಗೌರಿ ಶಂಕರ್ ಅವರು ತುಮಕೂರಿನ ಜಯನಗರ ಬಡಾವಣೆಯಲ್ಲಿರುವ ಅವರ ಗೃಹ ಕಚೇರಿಯಲ್ಲಿ ಗುರುವಾರ ದೇವೇಗೌಡರ ಗೆಲುವಿನ ಸಂಭ್ರಮಾಚರಣೆ ಮತ್ತು 87ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನೆ ಹಮ್ಮಿಕೊಂಡಿದ್ದು, ಸಿದ್ಧತೆಗಳು ಬುಧವಾರ ಭರದಿಂದ ನಡೆದಿದ್ದವು.ಸಚಿವ ಶ್ರೀನಿವಾಸ್ ಅವರು ಗುಬ್ಬಿಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಸ್ವಗೃಹದಲ್ಲಿ ಸಂಭ್ರಮಾಚರಣೆಗೆ ಬೆಂಬಲಿಗರನ್ನು ಆಹ್ವಾನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...