ತೆರಿಗೆ ಕಟ್ಟಿದೋರಿಗೆ ಭೂಮಿ ಕೊಟ್ಟಿದ್ದೇವೆ ! ಜಿಂದಾಲ್ ಪರವಾಗಿ ಸಚಿವ ಡಿಕೆ ಶಿವಕುಮಾರ್ ಕ್ಲಾಸ್ !?

Date:

ಒಂದೆಡೇ ಬಿಜೆಪಿ ಕಳೆದ ಎರಡು ದಿನಗಳಿಂದ ಜಿಂದಾಲ್ ಕಂಪನಿಗೆ ಭೂಮಿ ನೀಡಿದಕ್ಕೆ ವಿರೋಧಿಸಿ, ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಈ ಸಂದರ್ಭದಲ್ಲಿಯೇ ಸಚಿವ ಡಿಕೆ ಶಿವಕುಮಾರ್, ಜಿಂದಾಲ್ ಕಂಪನಿ ಬಂಡವಾಳ ಹೂಡಿ ಉದ್ಯೋಗ ಸೃಷ್ಠಿಸುವ ಮೂಲಕ ರಾಜ್ಯಕ್ಕೆ ತೆರಿಗೆ ಕಟ್ಟುತ್ತಿದೆ. ಹೀಗೆ ತೆರಿಗೆ ಕಟ್ಟಿದೋರಿಗೆ ಭೂಮಿಯನ್ನು ಕೊಡುತ್ತಿದ್ದೇವೆ ಎಂದು ಜಿಂದಾಲ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಡಿಕೆ ಶಿವಕುಮಾರ್, ಜಿಂದಾಲ್ ಕಂಪನಿಗೆ ಭೂಮಿಯನ್ನು ಕೊಡುವುದನ್ನು ನಾನಂತೂ ಬೆಂಬಲಿಸುತ್ತೇನೆ. ಏಕೆಂದರೇ ಇಂತಹ ಕಂಪನಿಗಳಿಗೆ ಅವಕಾಶ ನೀಡದಿದ್ದರೇ ಸರ್ಕಾರ ಎಲ್ಲಿಂದ ಉದ್ಯೋಗ ಸೃಷ್ಠಿ ಮಾಡುತ್ತದೆ. ಹೀಗಾಗಿ ನಾನು ಜಿಂದಾಲ್ ಪರ ಇದ್ದೇನೆ. ಬಂಡವಾಳ ಹೂಡೋದು ಕಂಪನಿಗಳು, ಉದ್ಯಮಿಗಳು.

ಅವರು ಜಿಎಸ್ ಟಿ ಕಟ್ಟುತ್ತಾ ಹಾಗೂ ಇತರೆ ನಿಯಗಳನ್ನು ಕೂಡ ಪಾಲಿಸುತ್ತಾರೆ ಎಂದು ಜಿಂದಾಲ್ ಪರವಾಗಿ, ಉದ್ಯಮಿಗಳ ಪರವಾಗಿ ಮಾತನಾಡಿದರು.

ಇದೇ ವೇಳೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಈ ಮೊದಲೇ ಪ್ರತಿಭಟನೆ ನಡೆಸಬೇಕಿತ್ತು. ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರಕ್ಕೆ ಫೌಂಡೇಶನ್ ಹಾಕಿದವರೇ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್. ಬೇಕಾದರೇ ದಾಖಲೆಗಳನ್ನು ತಗೆದು ನೋಡಲಿ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...