ತೆರಿಗೆ ಕಟ್ಟಿದೋರಿಗೆ ಭೂಮಿ ಕೊಟ್ಟಿದ್ದೇವೆ ! ಜಿಂದಾಲ್ ಪರವಾಗಿ ಸಚಿವ ಡಿಕೆ ಶಿವಕುಮಾರ್ ಕ್ಲಾಸ್ !?

Date:

ಒಂದೆಡೇ ಬಿಜೆಪಿ ಕಳೆದ ಎರಡು ದಿನಗಳಿಂದ ಜಿಂದಾಲ್ ಕಂಪನಿಗೆ ಭೂಮಿ ನೀಡಿದಕ್ಕೆ ವಿರೋಧಿಸಿ, ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ. ಈ ಸಂದರ್ಭದಲ್ಲಿಯೇ ಸಚಿವ ಡಿಕೆ ಶಿವಕುಮಾರ್, ಜಿಂದಾಲ್ ಕಂಪನಿ ಬಂಡವಾಳ ಹೂಡಿ ಉದ್ಯೋಗ ಸೃಷ್ಠಿಸುವ ಮೂಲಕ ರಾಜ್ಯಕ್ಕೆ ತೆರಿಗೆ ಕಟ್ಟುತ್ತಿದೆ. ಹೀಗೆ ತೆರಿಗೆ ಕಟ್ಟಿದೋರಿಗೆ ಭೂಮಿಯನ್ನು ಕೊಡುತ್ತಿದ್ದೇವೆ ಎಂದು ಜಿಂದಾಲ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಡಿಕೆ ಶಿವಕುಮಾರ್, ಜಿಂದಾಲ್ ಕಂಪನಿಗೆ ಭೂಮಿಯನ್ನು ಕೊಡುವುದನ್ನು ನಾನಂತೂ ಬೆಂಬಲಿಸುತ್ತೇನೆ. ಏಕೆಂದರೇ ಇಂತಹ ಕಂಪನಿಗಳಿಗೆ ಅವಕಾಶ ನೀಡದಿದ್ದರೇ ಸರ್ಕಾರ ಎಲ್ಲಿಂದ ಉದ್ಯೋಗ ಸೃಷ್ಠಿ ಮಾಡುತ್ತದೆ. ಹೀಗಾಗಿ ನಾನು ಜಿಂದಾಲ್ ಪರ ಇದ್ದೇನೆ. ಬಂಡವಾಳ ಹೂಡೋದು ಕಂಪನಿಗಳು, ಉದ್ಯಮಿಗಳು.

ಅವರು ಜಿಎಸ್ ಟಿ ಕಟ್ಟುತ್ತಾ ಹಾಗೂ ಇತರೆ ನಿಯಗಳನ್ನು ಕೂಡ ಪಾಲಿಸುತ್ತಾರೆ ಎಂದು ಜಿಂದಾಲ್ ಪರವಾಗಿ, ಉದ್ಯಮಿಗಳ ಪರವಾಗಿ ಮಾತನಾಡಿದರು.

ಇದೇ ವೇಳೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಈ ಮೊದಲೇ ಪ್ರತಿಭಟನೆ ನಡೆಸಬೇಕಿತ್ತು. ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರಕ್ಕೆ ಫೌಂಡೇಶನ್ ಹಾಕಿದವರೇ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್. ಬೇಕಾದರೇ ದಾಖಲೆಗಳನ್ನು ತಗೆದು ನೋಡಲಿ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...