ತೆಲುಗು ಇಂಡಸ್ಟ್ರಿ ಮೇಲೆ ರಾಬರ್ಟ್ ಗರಂ

Date:

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತೆಲುಗು ಇಂಡಸ್ಟ್ರಿ ಮೇಲೆ ಗರಂ ಆಗಿದ್ದಾರೆ.

ಮಾರ್ಚ್ 11 ಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ದೇಶದಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಈ ವೇಳೆ ತೆಲುಗು ಸಿನಿಮಾ ಇಂಡಸ್ಟ್ರಿ ದರ್ಶನ್ ರಾಬರ್ಟ್ ಸಿನಿಮಾ ತಮ್ಮ ರಾಜ್ಯದಲ್ಲಿ ರಿಲೀಸ್ ಆಗುವುದನ್ನ ತಡೆಯುತ್ತಿದೆ.

ಕೊರೊನಾ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿ ಹೊಸ ರೂಲ್ಸ್ ಜಾರಿ ಮಾಡಿಕೊಂಡಿದೆ. ಅದರ ಅನ್ವಯ ತೆಲುಗು ಸಿನಿಮಾ ಬಿಡುಗಡೆಯ ದಿನ ಬೇರೆ ಯಾವುದೇ ಪರಿಭಾಷೆಯ ಚಿತ್ರಗಳು ತಮ್ಮ ನಾಡಿನಲ್ಲಿ ಬಿಡುಗಡೆ ಮಾಡುವಂತಿಲ್ಲ ಅನ್ನೋ ನಿಯಮ ತೆಲುಗು ಸಿನಿಮಾ ಇಂಡಸ್ಟ್ರಿ ರೂಢಿಸಿಕೊಂಡಿದೆ. ಹೀಗಾಗಿ ಆಂಧ್ರ ತೆಲಂಗಾಣದಲ್ಲಿ ಮಾರ್ಚ್ 11 ಕ್ಕೆ ತೆಲುಗು ಸಿನಿಮಾ ರಿಲೀಸ್ ಇರುವ ಕಾರಣ ಕನ್ನಡದ ‘ರಾಬರ್ಟ್’ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಇದನ್ನ ಪ್ರಶ್ನಿಸಿ ದರ್ಶನ್ ಹಾಗೂ ರಾಬರ್ಟ್ ಟೀಮ್ ಇಂದು ಕನ್ನಡ ಫಿಲ್ಮ್ ಚೇಂಬರ್ ಗೆ ದೂರು ನೀಡುತ್ತಿದೆ.

ತೆಲುಗಿಗೆ ಡಬ್ ಆಗಿ ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್ ಆಗುತ್ತಿದೆ. ಇದನ್ನ ತೆಲುಗು ಇಂಡಸ್ಟ್ರಿ ತಡೆದಿದೆ. ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ನಿರ್ದೇಶಕ ತರುಣ್ ಸುಧೀರ್ ಫಿಲ್ಮ್ ಚೇಂಬರ್ಗೆ ದೂರು ಸಲ್ಲಿಸಲಿದ್ದಾರೆ. ಕನ್ನಡದಲ್ಲಿ ಪರಭಾಷಾ ಚಿತ್ರಗಳಿಗೆ ಅನುಮತಿ ನೀಡಲಾಗುತ್ತದೆ. ಆದರೆ ಅವರು ಇಂಥಹ ಕಠಿಣ ನಿಯಮ ಮಾಡಿಕೊಂಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...