ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ.?

0
59

ಬೆಂಗಳೂರು: “ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಐದಾರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಕಳೆದ ಐದಾರು ತಿಂಗಳುಗಳಿಂದ ಫಲಾನುಭವಿಗಳಿಗೆ ಮಾಸಾಶನ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ.
“ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ? ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ” ಎಂದು ಕಿಡಿಕಾರಿದ್ದಾರೆ.