ತೊಟ್ಟಿಲುಮಡು ಜಾತ್ರೆ ವೇಳೆ ಹೆಜ್ಜೆನು ದಾಳಿ !

By
0 Min Read

ಮಂಡ್ಯ: ಮೇಲುಕೋಟೆಯ ತೊಟ್ಟಿಲುಮಡು ಜಾತ್ರೆಯ ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ. ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ.
ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Share This Article