ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್: ಹುಬ್ಬಳ್ಳಿಯಲ್ಲಿ ನಡೆದ ಗುಂಡಿನ ದಾಳಿ!

Date:

ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್: ಹುಬ್ಬಳ್ಳಿಯಲ್ಲಿ ನಡೆದ ಗುಂಡಿನ ದಾಳಿ!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ದರೋಡೆಕೋರನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಂಧಿಸಲು ಹೋದ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆಗಿದ್ದಾನೆ. ಇಂದು ಬೆಳಿಗ್ಗೆ ಮಹೇಶ್ ಮತ್ತು ಈತನ ಗ್ಯಾಂಗ್‌ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್​ ಸೀತಾರಾಮ್​​ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು ಪರಾರಿಯಾದರು.

ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್​ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.

ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್​ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್​ನನ್ನು ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...