No menu items!
13.9 C
Munich
Wednesday, April 29, 2026

ದರ್ಶನ್ ಒಂದು ಮಾತಿಗೆ ಒಂದು ಕೋಟಿ ಕೊಟ್ರು ಅಭಿಮಾನಿಗಳು

Must read

ಕೊರೊನಾ ವೈರಸ್‌ನಿಂದ ಕರ್ನಾಟಕ ಮೃಗಾಲಯಗಳು ಹಾಗೂ ಪ್ರಾಣಿಗಳು ಸಂಕಷ್ಟನದಲ್ಲಿದೆ, ದಯವಿಟ್ಟು ದತ್ತು ಪಡೆಯುವುದರ ಮೂಲಕ ಸಹಾಯ ಮಾಡಿ ಎಂದು ನಟ ದರ್ಶನ್ ಐದು ದಿನಗಳ ಹಿಂದೆ ವಿನಂತಿಸಿದ್ದರು.

ಡಿ ಬಾಸ್ ಮನವಿ ಪರಿಣಾಮ 91 ಲಕ್ಷ ಹಣ ಸಂಗ್ರಹವಾಗಿದೆ ಎಂದ ಕರ್ನಾಟಕ ಮೃಗಾಲಯ ಆಡಳಿತ ಮಂಡಳಿ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಲಾಖೆ ”ಶ್ರೀ ದರ್ಶನ್ ತೂಗುದೀಪರ ಕರೆಗೆ ಓಗೊಟ್ಟು ಒಂದು ಕೋಟಿ ಸಮೀಪ ತಲುಪಿದ ಪ್ರಾಣಿ ಪ್ರಿಯರ ದತ್ತು ಮತ್ತು ದೇಣಿಗೆ ಮೊತ್ತ. ಎಲ್ಲಾ ದಾನಿಗಳಿಗೂ ಹಾಗೂ ದರ್ಶನ್‌ ರವರಿಗೆ ಅನಂತ ಧನ್ಯವಾದಗಳು” ಎಂದಿದೆ.

ಅಂದ್ಹಾಗೆ, ಜೂನ್ 5 ರಂದು ದರ್ಶನ್ ಮನವಿ ಮಾಡಿದ್ದರು. ಜೂನ್ 9 ರವರೆಗಿನ ಅವಧಿಯಲ್ಲಿ ಒಟ್ಟು ಏಂಟು ಮೃಗಾಲಯಗಳಲ್ಲಿ 91 ಲಕ್ಷದ 61 ಸಾವಿರ ರೂಪಾಯಿ ದತ್ತು ಹಣ ಸಂಗ್ರಹವಾಗಿದೆ.

ಮೈಸೂರು ಮೃಗಾಲಯವೊಂದರಲ್ಲೇ 47.5 ಲಕ್ಷ ಹಣ ಸಂಗ್ರಹವಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿ 26 ಲಕ್ಷ ಹಾಗೂ ಶಿವಮೊಗ್ಗದಲ್ಲಿ 6.9 ಲಕ್ಷ ಹಣ ದೇಣಿಗೆ ಬಂದಿದೆ. ಇದುವರೆಗೂ ಒಟ್ಟು 3548 ಮಂದಿ ಮೃಗಾಲಯಗಳಿಂದ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದಿದ್ದಾರೆ.

ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚಾಮುಂಡಿ ಹೆಸರಿನ ಆನೆ ಮರಿ ದತ್ತು ಪಡೆದಿದ್ದಾರೆ. ಈ ವಿಷಯವನ್ನು ದರ್ಶನ್ ಟ್ವಿಟ್ಟರ್‌ನಲ್ಲಿ ತಿಳಿಸಿ ನಿರ್ಮಾಪಕರಿಗೆ ಧನ್ಯವಾದ ಹೇಳಿದರು.

 

ಕಿರುತೆರೆ ನಟಿ ಕಾವ್ಯ ವೆಂಕಟೇಶ್ ಬಿಳಿ ನವಿಲು ದತ್ತು ಪಡೆದು ಸಂತಸ ಹಂಚಿಕೊಂಡಿದ್ದರು. ”ಕೋವಿಡ್‌ ಮಹಾಮಾರಿಯಿಂದ ಮಾನವಕುಲಕ್ಕೆ ಎಷ್ಟು ತೊಂದರೆ ಆಗಿದೆಯೋ ಅಷ್ಟೇ ತೊಂದರೆ ಪ್ರಾಣಿಸಂಕುಲಕ್ಕೂ ಆಗಿದೆ. ಅದರಿಂದ ಹಂಪಿ ಕ್ಷೇತ್ರದ “ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್”ನ ಬಿಳಿ ನವಿಲನ್ನು ದತ್ತು ಪಡೆದಿದ್ದೇನೆ.

ಯಾಕೆಂದರೆ ನಾನು ಚಿಕ್ಕಂದಿನಲ್ಲಿ ತುಂಬಾ ಇಷ್ಟ ಪಡುತ್ತಿದು ಪಕ್ಷಿ ನವಿಲು ಮತ್ತು ಇದು ನಮ್ಮ ರಾಷ್ಟ್ರೀಯ ಪಕ್ಷಿ ಅದರಿಂದ ನನಗೆ ಬಹಳ ಖುಷಿ ತಂದುಕೊಟ್ಟಿದೆ ಹಾಗೂ ಈ ನನ್ನ ಕೆಲಸಕ್ಕೆ ಮುಖ್ಯ ಕಾರಣಕರ್ತರು ಕನ್ನಡ ಚಲನಚಿತ್ರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (sir ) ಅವರಿಗೂ ಕೂಡ ತುಂಬು ಹೃದಯದ ಧನ್ಯವಾದಗಳು ಎಂದು ಇನ್ಸ್ಟಾದಲ್ಲಿ ಪೋಸ್ಟ್ ಹಾಕಿದ್ದಾರೆ.

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article