No menu items!
19.7 C
Munich
Thursday, August 13, 2026

ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ!

Must read

ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ!

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್‌ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡಲ್ಪಟ್ಟಿದೆ.
ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು.
ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ಸುಪ್ರೀಂಕೋರ್ಟ್ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article