ದರ್ಶನ್ ಸುದೀಪ್ ನಡುವೆ ಮತ್ತೊಮ್ಮೆ ವಾರ್!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಮೊದಲಿಂದಲೂ ಸಹ ಉತ್ತಮ ಸ್ನೇಹಿತರು. ಆದರೆ ಇತ್ತೀಚಿನ ಕೆಲ ದಿನಗಳಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಬೇರೆ ಬೇರೆಯಾಗಿದ್ದಾರೆ. ಸ್ವತಃ ದರ್ಶನ್ ಅವರೇ ಬಹಿರಂಗವಾಗಿ ಸುದೀಪ್ ನನ್ನ ಸ್ನೇಹಿತನಲ್ಲ ಎಂದು ಹೇಳುವ ಮುಖಾಂತರ ಇಬ್ಬರ ನಡುವಿನ ಬಿರುಕನ್ನು ಬಹಿರಂಗಪಡಿಸಿದ್ದರು.

 

ಇನ್ನು ಇದಾದ ಬಳಿಕ ಇಬ್ಬರೂ ಸಹ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇಬ್ಬರ ಅಭಿಮಾನಿಗಳ ನಡುವೆಯೂ ಸಹ ಪೈಪೋಟಿ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಆಗಾಗ ನಡೆಯುತ್ತಲೇ ಇರುತ್ತದೆ.  ಇನ್ನು ಅಭಿಮಾನಿಗಳ ಕಾಳಗ ಇದೀಗ ದೊಡ್ಡ ಮಟ್ಟಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿವೆ. ಹೌದು ಇದಕ್ಕೆ ಕಾರಣ ರಾಬರ್ಟ್ ಮತ್ತು ಕೋಟಿಗೊಬ್ಬ 3 ಸಿನಿಮಾಗಳೆರಡು ಒಂದೇ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವುದು.

 

 

ಹೌದು ಏಪ್ರಿಲ್ ತಿಂಗಳಿನಲ್ಲಿ ರಾಬರ್ಟ್ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಘೋಷಣೆಯನ್ನು ಈಗಾಗಲೇ ಚಿತ್ರತಂಡ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಕೋಟಿಗೊಬ್ಬ 3 ಸಿನಿಮಾದ ನಿರ್ಮಾಪಕರು ಸಹ ಏಪ್ರಿಲ್ 23 ರಂದು ಬೆಳ್ಳಿತೆರೆಗೆ ಕೋಟಿಗೊಬ್ಬ3 ಅಪ್ಪಳಿಸಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಂದಹಾಗೆ ಎರಡು ಸಿನೆಮಗಳು ಎಪ್ರಿಲ್ ತಿಂಗಳಲ್ಲಿ ಬಿಡುಗಡೆಯಾಗುವುದರಿಂದ ಇಬ್ಬರ ಅಭಿಮಾನಿಗಳ ನಡುವೆ ದೊಡ್ಡ ಫ್ಯಾನ್ ವಾರ್ ಆಗುವುದಂತೂ ಪಕ್ಕ.. ಏನೋ ಬಾಕ್ಸಾಫೀಸ್ ನಲ್ಲಿ ದರ್ಶನ್ ಮತ್ತು ಸುದೀಪನ್ ನಡುವೆ ಘರ್ಷಣೆ ಏರ್ಪಡಲಿದ್ದು  ಯಾರು ಗೆಲ್ಲುತ್ತಾರೆ ಎಂಬುದನ್ನ ಕಾದು ನೋಡಬೇಕು.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...