ದರ್ಶನ್ ಸುದೀಪ್ ನಡುವೆ ಮತ್ತೊಮ್ಮೆ ವಾರ್!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಮೊದಲಿಂದಲೂ ಸಹ ಉತ್ತಮ ಸ್ನೇಹಿತರು. ಆದರೆ ಇತ್ತೀಚಿನ ಕೆಲ ದಿನಗಳಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಬೇರೆ ಬೇರೆಯಾಗಿದ್ದಾರೆ. ಸ್ವತಃ ದರ್ಶನ್ ಅವರೇ ಬಹಿರಂಗವಾಗಿ ಸುದೀಪ್ ನನ್ನ ಸ್ನೇಹಿತನಲ್ಲ ಎಂದು ಹೇಳುವ ಮುಖಾಂತರ ಇಬ್ಬರ ನಡುವಿನ ಬಿರುಕನ್ನು ಬಹಿರಂಗಪಡಿಸಿದ್ದರು.

 

ಇನ್ನು ಇದಾದ ಬಳಿಕ ಇಬ್ಬರೂ ಸಹ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇಬ್ಬರ ಅಭಿಮಾನಿಗಳ ನಡುವೆಯೂ ಸಹ ಪೈಪೋಟಿ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಆಗಾಗ ನಡೆಯುತ್ತಲೇ ಇರುತ್ತದೆ.  ಇನ್ನು ಅಭಿಮಾನಿಗಳ ಕಾಳಗ ಇದೀಗ ದೊಡ್ಡ ಮಟ್ಟಕ್ಕೆ ಹೋಗುವ ಲಕ್ಷಣಗಳು ಕಾಣುತ್ತಿವೆ. ಹೌದು ಇದಕ್ಕೆ ಕಾರಣ ರಾಬರ್ಟ್ ಮತ್ತು ಕೋಟಿಗೊಬ್ಬ 3 ಸಿನಿಮಾಗಳೆರಡು ಒಂದೇ ತಿಂಗಳಲ್ಲಿ ಬಿಡುಗಡೆಯಾಗುತ್ತಿರುವುದು.

 

 

ಹೌದು ಏಪ್ರಿಲ್ ತಿಂಗಳಿನಲ್ಲಿ ರಾಬರ್ಟ್ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಘೋಷಣೆಯನ್ನು ಈಗಾಗಲೇ ಚಿತ್ರತಂಡ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಕೋಟಿಗೊಬ್ಬ 3 ಸಿನಿಮಾದ ನಿರ್ಮಾಪಕರು ಸಹ ಏಪ್ರಿಲ್ 23 ರಂದು ಬೆಳ್ಳಿತೆರೆಗೆ ಕೋಟಿಗೊಬ್ಬ3 ಅಪ್ಪಳಿಸಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಂದಹಾಗೆ ಎರಡು ಸಿನೆಮಗಳು ಎಪ್ರಿಲ್ ತಿಂಗಳಲ್ಲಿ ಬಿಡುಗಡೆಯಾಗುವುದರಿಂದ ಇಬ್ಬರ ಅಭಿಮಾನಿಗಳ ನಡುವೆ ದೊಡ್ಡ ಫ್ಯಾನ್ ವಾರ್ ಆಗುವುದಂತೂ ಪಕ್ಕ.. ಏನೋ ಬಾಕ್ಸಾಫೀಸ್ ನಲ್ಲಿ ದರ್ಶನ್ ಮತ್ತು ಸುದೀಪನ್ ನಡುವೆ ಘರ್ಷಣೆ ಏರ್ಪಡಲಿದ್ದು  ಯಾರು ಗೆಲ್ಲುತ್ತಾರೆ ಎಂಬುದನ್ನ ಕಾದು ನೋಡಬೇಕು.

 

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...