ದರ್ಶನ್ ಹೊಸ ಸಿನಿಮಾ ಅನೌನ್ಸ್!

Date:

‘ಡಿ ಬಾಸ್’ ದರ್ಶನ್ ಅವರು ಸಿನಿಮಾ ವಿಚಾರವಾಗಿ ಸದ್ದು ಮಾಡುತ್ತಿದ್ದಾರೆ. ‘ರಾಬರ್ಟ್’ ಭರ್ಜರಿ ಗೆಲುವು ಕಂಡಮೇಲೆ ದರ್ಶನ್ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಇತ್ತು. ‘ರಾಜಾ ವೀರ ಮದಕರಿ ನಾಯಕ’ ಸಿನಿಮಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ರಾಕ್‌ಲೈನ್‌ ವೆಂಕಟೇಶ್‌ ಬ್ಯಾನರ್‌ನಲ್ಲಿಯೇ ‘ಗೋಲ್ಡ್ ರಿಂಗ್’ ಅನ್ನೋ ಸಿನಿಮಾವನ್ನು ದರ್ಶನ್ ಮಾಡಲಿದ್ದಾರೆ ಎಂಬ ಮಾಹಿತಿ ಇತ್ತಾದರೂ, ಆ ಬಗ್ಗೆ ಯಾವುದೇ ಬೆಳವಣಿಗೆ ಆಗಿಲ್ಲ. ಈ ಮಧ್ಯೆ ದರ್ಶನ್ ನಟನೆಯ 55ನೇ ಸಿನಿಮಾದ ಬಗ್ಗೆ ಸದ್ದಿಲ್ಲದೇ ಮಾಹಿತಿ ಹೊರಬಿದ್ದಿದೆ.
‘ಯಜಮಾನ’ ಸಿನಿಮಾ ವೇಳೆಯೇ ನಟ ದರ್ಶನ್ ಜೊತೆಗೆ ಮತ್ತೊಂದು ಸಿನಿಮಾ ಮಾಡುವುದಾಗಿ ನಿರ್ಮಾಪಕರಾದ ಶೈಲಜಾ ನಾಗ್ ಮತ್ತು ಬಿ. ಸುರೇಶ ಹೇಳಿದ್ದರು. ಇದೀಗ ಆ ಸುದ್ದಿ ನಿಜವಾಗಿದೆ. ದರ್ಶನ್ ಅಭಿನಯದ 55ನೇ ಸಿನಿಮಾವನ್ನು ಶೈಲಜಾ ನಾಗ್ ಮತ್ತು ಬಿ. ಸುರೇಶ ಅವರ ಮೀಡಿಯಾ ಹೌಸ್‌ ಸ್ಟುಡಿಯೋ ನಿರ್ಮಾಣ ಮಾಡಲಿದೆ. ಈ ವಿಚಾರವನ್ನು ಶೈಲಜಾ ನಾಗ್ ಅಧಿಕೃತವಾಗಿ ತಿಳಿಸಿದ್ದಾರೆ. ಈ ಹಿಂದೆ ದರ್ಶನ್ ನಾಯಕತ್ವದಲ್ಲಿ ‘ಯಜಮಾನ’ ಸಿನಿಮಾವನ್ನು ಮೀಡಿಯಾ ಹೌಸ್‌ ಸ್ಟುಡಿಯೋ ನಿರ್ಮಾಣ ಮಾಡಿತ್ತು. ಅ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು.


ನಟ ದರ್ಶನ್ ಸ್ಯಾಂಡಲ್‌ವುಡ್‌ನ ಸ್ಟಾರ್ ನಟರಲ್ಲಿ ಒಬ್ಬರು. ಅವರ ಕಾಲ್‌ಶೀಟ್‌ಗಾಗಿ ನಿರ್ಮಾಪಕರು ಕಾದುಕುಳಿತಿರುತ್ತಾರೆ. ‘ರಾಬರ್ಟ್’ ಆದಮೇಲೆ ‘ರಾಜಾ ವೀರ ಮದಕರಿ ನಾಯಕ’ ಸಿನಿಮಾವನ್ನು ದರ್ಶನ್ ಕೈಗೆತ್ತಿಕೊಳ್ಳಬೇಕಿತ್ತು. ಆದರೆ, ಕೊರೊನಾ ಎಫೆಕ್ಟ್‌ನಿಂದಾಗಿ ಅದು ತಡವಾಗಿದೆ. ‘ಗೋಲ್ಡ್‌ ರಿಂಗ್’ ಅನ್ನೋ ಮತ್ತೊಂದು ಸಿನಿಮಾಕ್ಕೂ ದರ್ಶನ್ ರೆಡಿ ಆಗಿದ್ದರು. ಅದರಲ್ಲಿ ಅವರು ನೇವಿ ಆಫೀಸರ್ ಆಗಿ ಮಿಂಚಲಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ, ಆ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಸದ್ಯ ಶೈಲಜಾ ನಾಗ್ ಮತ್ತು ಬಿ. ಸುರೇಶ ಅವರ ಸಿನಿಮಾಕ್ಕೆ ಡಿ ಬಾಸ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದಾದ ಮೇಲೆ ‘ಮಿಲನ’ ಪ್ರಕಾಶ್, ನಿರ್ಮಾಪಕ ಎಂ.ಜಿ. ರಾಮಮೂರ್ತಿ, ತೆಲುಗು ನಿರ್ಮಾಪಕ ಬಿ.ವಿ. ಎಸ್‌.ಎನ್. ಪ್ರಸಾದ್ ಅವರೊಂದಿಗೂ ದರ್ಶನ್ ಸಿನಿಮಾ ಮಾಡಬೇಕಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...