ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ!!

Date:

2021ರಲ್ಲಿ ಜೀವನ ನಡೆಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಮೇಲು ಜಾತಿ ಕೀಳುಜಾತಿ ಎಂದೆಲ್ಲಾ ಭೇದಭಾವ ಮಾಡಿಕೊಂಡು ಬದುಕುತ್ತಿದ್ದ ಹಳ್ಳಿ ವಾಸಿಗಳೇ ಇಂದಿನ ಕಾಲಕ್ಕೆ ತಕ್ಕಂತೆ ಹಳೆಯ ಅಸ್ಪೃಶ್ಯತೆಯನ್ನು ಬಿಟ್ಟು ಬದುಕುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಓದು ಬರಹ ಕಲಿತ ಉನ್ನತ ಹುದ್ದೆಗಳಲ್ಲಿರುವ ಕೆಲ ಮಂದಿಗೆ ಇನ್ನೂ ಸಹ ಜಾತಿ ಎಂಬ ಭೂತ ಬಿಟ್ಟಂತೆ ಕಾಣುತ್ತಿಲ್ಲ.

 

 

ಹೌದು ಚಿಕ್ಕಮಗಳೂರಿನ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಅಮಾನವೀಯ ಕೃತ್ಯವನ್ನು ಎಸಗಿದ್ದಾನೆ. ಗ್ರಾಮದ ವಿವಾಹಿತ ಮಹಿಳೆಯೊಬ್ಬಳು ತನ್ನ ಪತಿಯೊಂದಿಗೆ ಜಗಳವಾಡಿಕೊಂಡಿದ್ದಾಳೆ, ಈ ಜಗಳದ ಕುರಿತು ಯಾವುದೇ ದೂರು ದಾಖಲಾಗದೇ ಇದ್ದರೂ ಸಹ ಅದೇ ಗ್ರಾಮದ 22 ವರ್ಷದ ದಲಿತ ಯುವಕ ಪುನೀತ್ ಎಂಬುವವನನ್ನು ಪಿಎಸ್ಐ ಅರ್ಜುನ್ ಠಾಣೆಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿದ್ದಾನೆ.

 

 

ಆ ಮಹಿಳೆ ಜೊತೆ ಅಕ್ರಮ ಸಂಬಂಧ ಇದ್ದು ಆಕೆಯನ್ನು ನಾನೇ ಬಚ್ಚಿಟ್ಟಿದ್ದೇನೆ ಅಂತ ಒಪ್ಪಿಕೊ ಎಂದು ಪುನೀತ್ ಎಂಬ ದಲಿತ ಯುವಕನಿಗೆ ಠಾಣೆಯಲ್ಲಿ ಮನಸೋ ಇಚ್ಛೆ ಪಿಎಸೈ ಅರ್ಜುನ್ ಬಾರಿಸಿದ್ದಾನೆ. ಮಾತು ಕೇಳದ ಆ ಯುವಕನಿಗೆ ಪಿಎಸ್ಸೈ ಅರ್ಜುನ್ ಮೂತ್ರ ಕೊಡಿಸಿದ್ದಾನೆ ಅಷ್ಟೇ ಅಲ್ಲದೆ ಮೂತ್ರವನ್ನು ನೆಕ್ಕಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆ ಪಿಎಸೈ ದಲಿತ ಯುವಕ ಪುನೀತ್ ಮೇಲೆ ಜಾತಿ ನಿಂದನೆ ಮಾಡಿ ಕೈಕಾಲುಗಳಲ್ಲಿ ರಕ್ತ ಬರುವ ಮಟ್ಟಿಗೆ ಹೊಡೆದು ತಡರಾತ್ರಿ ಮನೆಗೆ ಕಳುಹಿಸಿದ್ದಾನೆ. ಇದೀಗ ದೌರ್ಜನ್ಯಕ್ಕೊಳಗಾಗಿರುವ ಯುವಕ ಪುನೀತ್ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದಾನೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...