ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ!!

Date:

2021ರಲ್ಲಿ ಜೀವನ ನಡೆಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಮೇಲು ಜಾತಿ ಕೀಳುಜಾತಿ ಎಂದೆಲ್ಲಾ ಭೇದಭಾವ ಮಾಡಿಕೊಂಡು ಬದುಕುತ್ತಿದ್ದ ಹಳ್ಳಿ ವಾಸಿಗಳೇ ಇಂದಿನ ಕಾಲಕ್ಕೆ ತಕ್ಕಂತೆ ಹಳೆಯ ಅಸ್ಪೃಶ್ಯತೆಯನ್ನು ಬಿಟ್ಟು ಬದುಕುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಓದು ಬರಹ ಕಲಿತ ಉನ್ನತ ಹುದ್ದೆಗಳಲ್ಲಿರುವ ಕೆಲ ಮಂದಿಗೆ ಇನ್ನೂ ಸಹ ಜಾತಿ ಎಂಬ ಭೂತ ಬಿಟ್ಟಂತೆ ಕಾಣುತ್ತಿಲ್ಲ.

 

 

ಹೌದು ಚಿಕ್ಕಮಗಳೂರಿನ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಅಮಾನವೀಯ ಕೃತ್ಯವನ್ನು ಎಸಗಿದ್ದಾನೆ. ಗ್ರಾಮದ ವಿವಾಹಿತ ಮಹಿಳೆಯೊಬ್ಬಳು ತನ್ನ ಪತಿಯೊಂದಿಗೆ ಜಗಳವಾಡಿಕೊಂಡಿದ್ದಾಳೆ, ಈ ಜಗಳದ ಕುರಿತು ಯಾವುದೇ ದೂರು ದಾಖಲಾಗದೇ ಇದ್ದರೂ ಸಹ ಅದೇ ಗ್ರಾಮದ 22 ವರ್ಷದ ದಲಿತ ಯುವಕ ಪುನೀತ್ ಎಂಬುವವನನ್ನು ಪಿಎಸ್ಐ ಅರ್ಜುನ್ ಠಾಣೆಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿದ್ದಾನೆ.

 

 

ಆ ಮಹಿಳೆ ಜೊತೆ ಅಕ್ರಮ ಸಂಬಂಧ ಇದ್ದು ಆಕೆಯನ್ನು ನಾನೇ ಬಚ್ಚಿಟ್ಟಿದ್ದೇನೆ ಅಂತ ಒಪ್ಪಿಕೊ ಎಂದು ಪುನೀತ್ ಎಂಬ ದಲಿತ ಯುವಕನಿಗೆ ಠಾಣೆಯಲ್ಲಿ ಮನಸೋ ಇಚ್ಛೆ ಪಿಎಸೈ ಅರ್ಜುನ್ ಬಾರಿಸಿದ್ದಾನೆ. ಮಾತು ಕೇಳದ ಆ ಯುವಕನಿಗೆ ಪಿಎಸ್ಸೈ ಅರ್ಜುನ್ ಮೂತ್ರ ಕೊಡಿಸಿದ್ದಾನೆ ಅಷ್ಟೇ ಅಲ್ಲದೆ ಮೂತ್ರವನ್ನು ನೆಕ್ಕಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆ ಪಿಎಸೈ ದಲಿತ ಯುವಕ ಪುನೀತ್ ಮೇಲೆ ಜಾತಿ ನಿಂದನೆ ಮಾಡಿ ಕೈಕಾಲುಗಳಲ್ಲಿ ರಕ್ತ ಬರುವ ಮಟ್ಟಿಗೆ ಹೊಡೆದು ತಡರಾತ್ರಿ ಮನೆಗೆ ಕಳುಹಿಸಿದ್ದಾನೆ. ಇದೀಗ ದೌರ್ಜನ್ಯಕ್ಕೊಳಗಾಗಿರುವ ಯುವಕ ಪುನೀತ್ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದಾನೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...