ದಲಿತ ಸಿಎಂ ವಿಚಾರ ಅದು 2013 ರಿಂದಲೂ ಓಡುತ್ತಲೆ ಇದೆ: ಸತೀಶ್ ಜಾರಕಿಹೊಳಿ

Date:

ಬೆಂಗಳೂರು: ದಲಿತ ಸಿಎಂ ವಿಚಾರ ಅದು 2013 ರಿಂದಲೂ ಓಡುತ್ತಲೆ ಇದೆ. 5 ವರ್ಷ ಅದೆ ಓಡಿತು ಆದರೆ ಪಿಚ್ಚರ್ ರಿಲೀಸ್ ಆಗಲಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಖರ್ಗೆಯವರು ಇದ್ದರು ಆಗಲೂ ಅವಕಾಶ ಆಗಲಿಲ್ಲ. ಪರಮೇಶ್ವರ್ ಅವರು 8 ವರ್ಷ ಅಧ್ಯಕ್ಷರಾಗಿದ್ದರು ಅವರಿಗೆ ಡಿಸಿಎಂ ಆಗೋಕು ಆಗಲಿಲ್ಲ.ಎರಡುವರೆ ವರ್ಷದ ನಂತರ ಏನಾಗುತ್ತೆ ಅಂತ ಸಿಎಂ ಇದಾರೆ, ಡಿಸಿಎಂ ಇದಾರೆ ಪಕ್ಷದ ಅಧ್ಯಕ್ಷರ ಇದ್ದಾರೆ ಹೈ ಕಮಾಂಡ್ ನಾಯಕರಿದ್ದರೆ ಅದೆಲ್ಲಾ ಅವರು ತೀರ್ಮಾನ ಮಾಡ್ತಾರೆ ಎಂದರು.
ಹಾಗೆ ಸಿಎಂ ಕರೆದ ಸಭೆಗೆ ನಾನು ಬಂದಿರಲಿಲ್ಲ.ಅನಾರೋಗ್ಯದ ಕಾರಣ ನಾನು ಬಂದಿರಲಿಲ್ಲ.ಅದನ್ನ ಸಿಎಂ ಗಮನಕ್ಕೆ ತಂದಿದ್ದೆ.ಬರಲಿಲ್ಲ ಅಂದ ಕೂಡಲೆ ಬೇರೆ ಅರ್ಥ ಕಲ್ಪಿಸುವುದು ಬೇಡ.ನಾನು ಇಲ್ಲದಿದ್ದರು ಅಲ್ಲಿನ ತೀರ್ಮಾನ ಎಲ್ಲರಿಗೂ ಅನ್ವಯವಾಗುತ್ತೆ. ಯಾರು ಮಾತನಾಡಬಾರದು ಅನ್ನೋದು ಸರಿ ಇದೆ.ಮಾತನಾಡಿದರೆ ಸುಮ್ಮನೆ ಗೊಂದಲ ಉಂಟಾಗುತ್ತೆ ಎಂದು ಹೇಳಿ ಸುಮ್ಮನಾದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...