ನಟ ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಅಪ್ಪು ಅಭಿಮಾನಿಗಳಿಗೆ ದೊಡ್ಮನೆ ಕುಟುಂಬದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಇನ್ನೊಂದು ಕಡೆ ಪತ್ರಕರ್ತರು, ರಕ್ತದಾನ , ನೇತ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಅಪ್ಪು ಸಾವಿನ ನಂತರ ರಾಜ್ಯಾದ್ಯಂತ ನೇತ್ರದಾನ ವಿಚಾರದಲ್ಲಿ ಹೊಸ ದಾಖಲೆ ಬರೆದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಪ್ಪು ಅಭಿಮಾನಿಗಳು ಆಸ್ಪತ್ರೆಗೆ ಬಂದು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಧಿಡೀರ್ ಆಗಿ ಶೇ.30 ಕ್ಕೆ ಏರಿದೆ. ಇಂದು ನಾರಾಯಣ ನೇತ್ರಾಲಯ ಸಹಯೋಗದೊಂದಿಗೆ ನೇತ್ರದಾನ ಕ್ಯಾಂಪ್ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ಬರೋಬ್ಬರಿ 3100 ಜನರು ನೇತ್ರದಾನಕ್ಕೆ ನೊಂದಣಿ ಮಾಡಿಕೊಂಡಿದ್ದಾರೆ. ಈ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.