ದಾಯಾದಿಗಳ‌ ಮಧ್ಯೆ ಶುರುವಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ!

Date:

ದಾಯಾದಿಗಳ‌ ಮಧ್ಯೆ ಶುರುವಾದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ!

ಕೋಲಾರ: ದಾಯಾದಿಗಳ‌ ಮಧ್ಯೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ. ಮುನಿರಾಜು (35) ಕೊಲೆಯಾದ ವ್ಯಕ್ತಿಯಾಗಿದ್ದು, ಬೋರ್ ವೆಲ್ ಲಾರಿ ಹಾಗು ಮೆಣಸಿನ ಗಿಡ ಹಾಳು ಮಾಡಿದ್ದಾರೆಂದು ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ದಾಯಾದಿಗಳ‌ ಮಧ್ಯೆ ಗಲಾಟೆ ಶುರುವಾಗಿದ್ದು, ಈ ವೇಳೇ ದಾಯಾದಿ ಮುನಿರಾಜು ಕೊಲೆಯಾಗಿದೆ. ಅಣ್ಣಯ್ಯಪ್ಪ, ವೀರಸ್ವಾಮಿ, ಸೋಮಶೇಖರ್, ಕಾಂತರಾಜು, ಭರತ್, ವೆಂಕಟೇಶ್, ಭಾಗ್ಯಮ್ಮ ಅವರಿಂದ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದು, ಮಾಲೂರು ಪೊಲೀಸರಿಂದ 4 ಜನರ ಬಂಧನ ಮಾಡಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...