ದಾರುಣ ಘಟನೆ: RCB ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು

Date:

ದಾರುಣ ಘಟನೆ: RCB ಸಂಭ್ರಮಾಚರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಸಾವು

ಬೆಳಗಾವಿ: ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ನಲ್ಲಿ ಗೆಲ್ಲುವ ಮೂಲಕ ಐಪಿಎಲ್ನ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ. ಲಕ್ಷಾಂತರ ಅಭಿಮಾನಿಗಳ ನಡುವೆ ಕಪ್ ಗೆದ್ದ ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದೆ. 4ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದ ಬೆಂಗಳೂರು ತಂಡ ಟ್ರೋಫಿ ಜೊತೆ ನಗುತ್ತಿದೆ.
ಇದರ ಮಧ್ಯೆ ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ.
ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...