ದಿಢೀರ್ ಪ್ರತ್ಯಕ್ಷರಾದ ಶಾಸಕ ಆನಂದ್ ಸಿಂಗ್ ಮನವೊಲಿಸುತ್ತಾರಾ ಕಾಂಗ್ರೆಸ್ ನಾಯಕರು..?

Date:

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ಆನಂದ್ ಸಿಂಗ್ ಅತೃಪ್ತ ಶಾಸಕರ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಾವು ನಾಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಜಾರಿ ಬಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳ್ಳಾರಿ ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಕಾರಣದಿಂದ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾಗಿ ಅವರು ಹೇಳಿದ್ದಾರೆ.

ನಾಪತ್ತೆಯಾದ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾಗಿ ಹೇಳಿಕೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.ಆನಂದ್ ಸಿಂಗ್ ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...