‘ದಿ ಟಾಸ್ಕ್’ಗೆ ಮುಹೂರ್ತದ ಸಂಭ್ರಮ…ಇದು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ

Date:

 

ಚೂರಿಕಟ್ಟೆ, ಪೆಂಟಗನ್ ಸಿನಿಮಾಗಳ ಸೂತ್ರಧಾರ ರಾಘು ಶಿವಮೊಗ್ಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಆ ಚಿತ್ರ ಇಂದು ಸೆಟ್ಟೇರಿದೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ ಸ್ವಾಮಿ ದೇಗುಲದಲ್ಲಿಂದು ರಾಘು ನಿರ್ದೇಶನದ ಮೂರನೇ ಸಿನಿಮಾ ದಿ ಟಾಸ್ಕ್ ಮುಹೂರ್ತ ನೆರವೇರಿದೆ. ಡಿವೈಎಸ್ ಪಿ ರಾಜೇಶ್ ದಿ ಟಾಸ್ಕ್ ಗೆ ಕ್ಲ್ಯಾಪ್ ಮಾಡಿದ್ರೆ, ಕೈವಾ ಸಿನಿಮಾದ ಛಾಯಾಗ್ರಾಹಕಿ ಶ್ವೇತ್ ಪ್ರಿಯಾ ಕ್ಯಾಮೆರಾಗೆ ಚಾಲನೆ ಕೊಟ್ಟರು.

ದಿ ಟಾಸ್ಕ್ ಸಿನಿಮಾ ನೈಜ ಘಟನೆಯ ಸ್ಫೂರ್ತಿ ಆಧಾರಿತ ಸಿನಿಮಾ. ಈ ಹಿಂದೆ ರಾಘು ಶಿವಮೊಗ್ಗ ನಿರ್ದೇಶನದ ಪೆಂಟಗನ್ ನಲ್ಲಿ ಹೀರೋ ಆಗಿ ಅಭಿನಯಿಸಿದ್ದ ಸಾಗರ್ ಹಾಗೂ ಭೀಮ ಚಿತ್ರದಲ್ಲಿ ಖಳನಾಯಕನಾಗಿ ಪರಿಚಯರಾಗಿದ್ದ ಜಯಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಗೋಪಾಲ್ ಕೃಷ್ಣ ದೇಶಪಾಂಡೇ, ಶ್ರೀಲಕ್ಷ್ಮೀ, ಅರವಿಂದ್ ಕುಪ್ಳಿಕರ್, ಬಿಂಬಶ್ರೀ ನೀನಾಸಂ, ಹರಿಣಿ ಶ್ರೀಕಾಂತ್, ಬಾಲಾಜಿ ಮನೋಹರ್ ಸೇರಿದಂತೆ ನಿರ್ದೇಶಕ ರಾಘು ಶಿವಮೊಗ್ಗ ಕೂಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಲೋಕಪೂಜ್ಯ ಪಿಕ್ಚರ್ ಹೌಸ್ ಸಂಸ್ಥೆಯಡಿ ನಿರ್ಮಾಪಕ ವಿಜಯ್ ಕುಮಾರ್ ಹಾಗೂ ರಾಮಣ್ಣ E ದಿ ಟಾಸ್ಕ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದು, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...