ದೀಪಾವಳಿ ದಿನದಂದೇ ಅಗ್ನಿ ಅವಘಡ: ಏಳು ಮೀನುಗಾರಿಕಾ ಬೋಟ್ ಗಳಿಗೆ ಬೆಂಕಿ

Date:

ಉಡುಪಿ: ಅಗ್ನಿ ಅವಘಡದಿಂದಾಗಿ 7 ಮೀನುಗಾರಿಕಾ ಬೋಟ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ದೀಪಾವಳಿ ಪೂಜೆಯ ವೇಳೆ ಹಚ್ಚಿದ ಪಟಾಕಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ. ಬೈಂದೂರು ಹಾಗೂ ಗಂಗೊಳ್ಳಿ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಹೆಚ್ಚುವರಿ ಅಗ್ನಿಶಾಮಕ ವಾಹನಗಳನ್ನು ರವಾನೆ ಮಾಡಲಾಗಿದೆ.
ದುರಂತದಲ್ಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಬೋಟ್ಗಳನ್ನು ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಲಾಗಿತ್ತು. ಬೋಟ್ಗಳ ಮೇಲೆ ತೆಂಗಿನ ಗರಿಗಳನ್ನು ಹಾಸಲಾಗಿತ್ತು. ಆರಂಭದಲ್ಲಿ ಬೋಟ್ ಮೇಲೆ ಹಾಸಿದ್ದ ತೆಂಗಿನ ಗರಿಗಳಿಗೆ ಬೆಂಕಿ ತಗುಲಿದೆ. ಬಳಿಕ ಬೋಟ್ಗಳಿಗೆ ವ್ಯಾಪಿಸಿದ್ದು ಭಾರೀ ಪ್ರಮಾಣದ ಅಗ್ನಿ ಅವಘಡಕ್ಕೆ ಕಾರಣವಾಗಿದೆ. ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...