ದುಡ್ಡಿಗಾಗಿ ಐಪಿಎಲ್ ಆಡುವುದಿಲ್ಲ ಎಂದ ಆಫ್ರಿಕಾ ಕ್ರಿಕೆಟಿಗ

Date:

ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹಲವು ಕ್ರಿಕೆಟಿಗರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂದು ಸ್ಟಾರ್ ಕ್ರಿಕೆಟಿಗರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಆಟಗಾರರು ಅಂತಾರಾಷ್ಟ್ರೀಯ ತಂಡಗಳಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡ ಹಲವಾರು ಉದಾಹರಣೆಗಳಿವೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿಯೂ ಸಹ ಯುವ ಪ್ರತಿಭೆಗಳು ಮಿಂಚು ಹರಿಸಿದ್ದನ್ನು ನೀವು ಗಮನಿಸಿರಬಹುದು. ಆದರೆ ಕೊರೊನಾವೈರಸ್ ಕಾರಣದಿಂದಾಗಿ ಪ್ರಸ್ತುತ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ಐಪಿಎಲ್ ಟೂರ್ನಿಯನ್ನು ಮುಂದೂಡಿದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾದ ಬೌಲರ್ ಟಬ್ರೈಜ್ ಶಂಸಿ ಐಪಿಎಲ್ ಮತ್ತು ಸಿಪಿಎಲ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

 

ಕೆರಿಬಿಯನ್ ಪ್ರೀಮಿಯರ್ ಲೀಗ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಕ್ರಿಕೆಟ್ ಜೀವನದಲ್ಲಿ ದೊಡ್ಡ ತಿರುವನ್ನು ನೀಡಿದವು ಎಂದು ಶಂಸಿ ಹೇಳಿಕೊಂಡಿದ್ದಾರೆ. ತುಂಬಾ ಜನ ಆಟಗಾರರು ಐಪಿಎಲ್ ಟೂರ್ನಿಗಳಲ್ಲಿ ಭಾಗವಹಿಸುವುದು ಹಣಕ್ಕಾಗಿ ಎಂದು ತಪ್ಪಾಗಿ ತಿಳಿದುಕೊಂಡಿದ್ದಾರೆ, ಆದರೆ ಐಪಿಎಲ್ ಟೂರ್ನಿಯಿಂದ ಆಟಗಾರನೊಬ್ಬ ಬಹಳಷ್ಟು ವಿಷಯಗಳನ್ನು ಕಲಿಯುತ್ತಾನೆ, ಕೇವಲ ದುಡ್ಡಿಗಾಗಿ ಆಟಗಾರರು ಐಪಿಎಲ್ ಟೂರ್ನಿಗಳಲ್ಲಿ ಭಾಗವಹಿಸುವುದಿಲ್ಲ ಎಂದು ಶಂಸಿ ತಿಳಿಸಿದರು.

 

ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿ ನಂತರ ಐಪಿಎಲ್ ಟೂರ್ನಿಯಲ್ಲಿ ಆಡಿದ ತನಗೆ ದಕ್ಷಿಣ ಆಫ್ರಿಕಾ ತಂಡದ ಪರ ಆಡಲು ಹೆಚ್ಚಿನ ಅವಕಾಶಗಳು ಸಿಕ್ಕಿತು ಎಂದು ಶಂಸಿ ತಿಳಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ವಿವಿಧ ದೇಶಗಳ ಹಲವಾರು ಆಟಗಾರರ ಜೊತೆ ಆಡುವುದರಿಂದ ಬಹಳಷ್ಟು ವಿಷಯಗಳನ್ನು ಕಲಿಯಬಹುದು, ತನ್ನ ಬೌಲಿಂಗ್ ಕೂಡ ಐಪಿಎಲ್ ಟೂರ್ನಿಯ ಮುಖಾಂತರ ಸಾಕಷ್ಟು ಅಭಿವೃದ್ಧಿಗೊಂಡಿತು ಎಂದು ಟಬ್ರೈಜ್ ಶಂಸಿ ಐಪಿಎಲ್ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...