No menu items!
15 C
Munich
Tuesday, August 25, 2026

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

Must read

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ಬೆಂಗಳೂರು: ದುಬೈನಲ್ಲಿ ಯುದ್ಧದ ಹಿನ್ನಲೆಯಲ್ಲಿ ಸಿಲುಕಿದ್ದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಇಂದು ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಿದ್ದಾರೆ.

ಅವರೊಂದಿಗೆ ಕರ್ನಾಟಕ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಕೂಡ ಬೆಂಗಳೂರಿಗೆ ಬಂದಿದ್ದಾರೆ. ಇಬ್ಬರೂ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದ ವೇಳೆ ಯುದ್ಧದ ಪರಿಸ್ಥಿತಿ ಉಂಟಾಗಿತ್ತು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಯುದ್ಧದ ವಿಷಯ ತಿಳಿದಾಗ ಸ್ವಲ್ಪ ಆತಂಕ ಉಂಟಾಯಿತು ಎಂದು ಹೇಳಿದರು.

ವಿದೇಶದಲ್ಲಿದ್ದ ಕಾರಣ ಹೊರಗೆ ಏನಾಗುತ್ತಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿರಲಿಲ್ಲ. ಈ ನಡುವೆ ಕುಟುಂಬದವರು ಮತ್ತು ಸ್ನೇಹಿತರು ನಿರಂತರವಾಗಿ ಕರೆ ಮಾಡಿ ಮಾಹಿತಿ ಕೇಳುತ್ತಿದ್ದರು ಎಂದು ಹೇಳಿದರು. ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿರುವುದು ಬಹಳ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article