ದೆಹಲಿ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಗರಂ!

Date:

“ನಾನು ಎಲ್ಲರಂತಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮತ್ತೊಮ್ಮೆ ಗರಂ ಆಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಾಗ ವಿಧಾನಸೌಧದಲ್ಲಿ ನಡೆಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, “ಹಿಂದೆನಾಗಿದೆ ನನಗೇ ಬೇಕಿಲ್ಲ. ನಾನು ಎಲ್ಲರಂತಲ್ಲ” ಎಂದು ಖಡಕ್ ಆದೇಶ ಕೊಟ್ಟಿದ್ದರು. ಆ ಮೂಲಕ ತಾವು ಈ ಹಿಂದಿನ ಯಾವುದೇ ಮುಖ್ಯಮಂತ್ರಿಗಳಂತೆ ಅಲ್ಲ ಎಂದು ಎಚ್ಚರಿಸಿದ್ದರು.

ಇದೀಗ ದೆಹಲಿಯಲ್ಲಿ ನಡೆದ ಕಾನೂನು ತಜ್ಞರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಪರವಾಗಿ ವಕಾಲತ್ತು ವಹಿಸುವ ಹಿರಿಯ ವಕೀಲರ ತಂಡಕ್ಕೆ ಬೊಮ್ಮಾಯಿ ಖಡಕ್ ಸಂದೇಶ ನೀಡಿದ್ದಾರೆ. “ನಾನು ಖಡಕ್ ಮುಖ್ಯಮಂತ್ರಿ. ಬೇರೆ ಮುಖ್ಯಮಂತ್ರಿಗಳಂತೆ ನಾನಲ್ಲ. ಹಿಂದಿನಿಂದಲೂ ಕೆಲಸ ಮಾಡಿಕೊಂಡು ಬಂದಿದ್ದಿರಿ. ರಾಜ್ಯದ ಜಲ ವ್ಯಾಜ್ಯಗಳಿಗೆ ಇನ್ನು ಮುಂದೆ ವೇಗ ಸಿಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು” ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಆದರೆ ನೀರಾವರಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆಯಾ? ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೇಕಾಗಿರುಯವ ಭೂಸ್ವಾಧೀನ ಪ್ರಕ್ರಿಯೆ ಶುರುವಾಗಿದೆಯಾ? ಎಂಬುದಕ್ಕೆ ಜಲಸಂಪನ್ಮೂಲ ಸಚಿವರಾಗಿಯೂ ಈ ಹಿಂದೆ ಕೆಲಸ ನಿರ್ವಹಿಸಿದ್ದ ಸಿಎಂ ಬೊಮ್ಮಾಯಿ ಉತ್ತರಿಸಬೇಕಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...